ಬ್ರೇಕಿಂಗ್ ನ್ಯೂಸ್
05-06-25 03:05 pm HK News Desk ಕರಾವಳಿ
ಮಂಗಳೂರು, ಜೂನ್ 5: ಅರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ. ಯಾವುದೋ ಒಂದು ಭಾವನೆ ಮತ್ತು ಹರ್ಷೋದ್ಘಾರದಲ್ಲಿ ವಿಜಯೋತ್ಸವ ಮಾಡುವಾಗ ಘಟನೆ ನಡೆದಿದೆ. ಏನಾಗಿದೆ ಏನಾಗಿಲ್ಲ ಅನ್ನೋದನ್ನ ಮುಖ್ಯಮಂತ್ರಿಗಳು ಹೇಳಬೇಕಾಗುತ್ತದೆ. ಐಪಿಎಲ್ ನಡೆಸೋರು ಕರೋಡ್ ಪತಿಗಳಲ್ಲ, ಸಾವಿರಾರು ಕೋಟಿ ಮಾಲೀಕರು. ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಕಡೆಯಿಂದ ಒಂದೊಂದು ಕೋಟಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಮಾಡ್ತೀನಿ, ರಾಜ್ಯ ಸರ್ಕಾರದಿಂದಲೇ ಬಿಸಿಸಿಐನಿಂದ ಒಂದು ಕೋಟಿ ಕೊಡಿಸಬೇಕು. ಎಲ್ಲರೂ ದುಃಖದಲ್ಲಿದ್ದಾರೆ, ಹಾಗಾಗಿ ಏನೂ ಹೇಳಲು ಹೋಗಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ದುಃಖ ತಡೆದುಕೊಳ್ಳಲು ಭಗವಂತ ಶಕ್ತಿ ಕೊಡಲಿ. ಸರ್ಕಾರ ಏನ್ ಮಾಡಿದೆ, ಏನ್ ಮಾಡಿಲ್ಲ ಅಂತ ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳಲು ಆಗಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ಈ ಬಗ್ಗೆ ತಿಳುವಳಿಕೆ ಕೊಡಬೇಕು.
ಚಿನ್ನಸ್ವಾಮಿ ಕ್ರೀಡಾಂಗಣದ ಕೆಪಾಸಿಟಿ ಇರೋದು 35 ಸಾವಿರ ಜನ ಮಾತ್ರ. ಉಚಿತ ಅಂದ ತಕ್ಷಣ ಮೂರು ಲಕ್ಷ ಜನ ಅಲ್ಲಿಗೆ ಬಂದಿದಾರೆ. ಸಾವಿರಕ್ಕೆ ಒಂದು ಪೊಲೀಸ್ ನಮ್ಮಲ್ಲಿರೋದು, ಎಲ್ಲೋ ಒಂದು ಕಡೆ ಹೆಚ್ಚು ಕಮ್ಮಿ ಆಗಿದೆ. ಸಾವು ಹೊರಗಡೆ ಆದಾಗ ಒಳಗಡೆ ಸೆಲೆಬ್ರೇಷನ್ ನಿಲ್ಲಿಸಬೇಕಾಗಿತ್ತು. ಅಭಿಮಾನಿಗಳು ಬರೋವಾಗ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಯೋಚನೆ ಮಾಡಬೇಕಾಗಿತ್ತು.
ಹೈಕೋರ್ಟ್ ಗೆ ಸುಮೊಟೋ ಕೇಸ್ ಮಾಡುವ ಎಲ್ಲಾ ಹಕ್ಕಿದೆ, ಅದೇ ಥರ ಎಲ್ಲದರಲ್ಲೂ ಮಾಡಿದರೆ ಒಳ್ಳೆಯದು. ಹನ್ನೊಂದು ಜನರ ಸಾವಿಗೆ ಯಾರು ಹೊಣೆ ಅಂತ ಸರ್ಕಾರ ಹೇಳಬೇಕು. ಇದು ಸರ್ಕಾರ ನಡೆಸಿರೋ ಕ್ರಿಕೆಟ್ ಅಲ್ಲ. ವಿಧಾನಸೌಧ ಬಳಿ ಯಾವುದೇ ಘಟನೆ ಆಗಿಲ್ಲ. ಇನ್ಜು ಸ್ಟೇಡಿಯಂನವರು ಕಾರ್ಯಕ್ರಮ ನಡೆಸುವಾಗ ಸ್ವಲ್ಪ ಯೋಚನೆ ಮಾಡಿ ನಡೆಸಬೇಕಿತ್ತು. ಅಮಾಯಕರು, ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಹೊರಬೇಕು ಎಂದು ಹೇಳಿದರು.
B K Hariprasad in Mangalore Demands Rs 1 Crore Compensation from BCCI for Each Victim of IPL Celebration Tragedy
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm