ಬ್ರೇಕಿಂಗ್ ನ್ಯೂಸ್
05-06-25 03:05 pm HK News Desk ಕರಾವಳಿ
ಮಂಗಳೂರು, ಜೂನ್ 5: ಅರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ. ಯಾವುದೋ ಒಂದು ಭಾವನೆ ಮತ್ತು ಹರ್ಷೋದ್ಘಾರದಲ್ಲಿ ವಿಜಯೋತ್ಸವ ಮಾಡುವಾಗ ಘಟನೆ ನಡೆದಿದೆ. ಏನಾಗಿದೆ ಏನಾಗಿಲ್ಲ ಅನ್ನೋದನ್ನ ಮುಖ್ಯಮಂತ್ರಿಗಳು ಹೇಳಬೇಕಾಗುತ್ತದೆ. ಐಪಿಎಲ್ ನಡೆಸೋರು ಕರೋಡ್ ಪತಿಗಳಲ್ಲ, ಸಾವಿರಾರು ಕೋಟಿ ಮಾಲೀಕರು. ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಕಡೆಯಿಂದ ಒಂದೊಂದು ಕೋಟಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಮಾಡ್ತೀನಿ, ರಾಜ್ಯ ಸರ್ಕಾರದಿಂದಲೇ ಬಿಸಿಸಿಐನಿಂದ ಒಂದು ಕೋಟಿ ಕೊಡಿಸಬೇಕು. ಎಲ್ಲರೂ ದುಃಖದಲ್ಲಿದ್ದಾರೆ, ಹಾಗಾಗಿ ಏನೂ ಹೇಳಲು ಹೋಗಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ದುಃಖ ತಡೆದುಕೊಳ್ಳಲು ಭಗವಂತ ಶಕ್ತಿ ಕೊಡಲಿ. ಸರ್ಕಾರ ಏನ್ ಮಾಡಿದೆ, ಏನ್ ಮಾಡಿಲ್ಲ ಅಂತ ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳಲು ಆಗಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ಈ ಬಗ್ಗೆ ತಿಳುವಳಿಕೆ ಕೊಡಬೇಕು.
ಚಿನ್ನಸ್ವಾಮಿ ಕ್ರೀಡಾಂಗಣದ ಕೆಪಾಸಿಟಿ ಇರೋದು 35 ಸಾವಿರ ಜನ ಮಾತ್ರ. ಉಚಿತ ಅಂದ ತಕ್ಷಣ ಮೂರು ಲಕ್ಷ ಜನ ಅಲ್ಲಿಗೆ ಬಂದಿದಾರೆ. ಸಾವಿರಕ್ಕೆ ಒಂದು ಪೊಲೀಸ್ ನಮ್ಮಲ್ಲಿರೋದು, ಎಲ್ಲೋ ಒಂದು ಕಡೆ ಹೆಚ್ಚು ಕಮ್ಮಿ ಆಗಿದೆ. ಸಾವು ಹೊರಗಡೆ ಆದಾಗ ಒಳಗಡೆ ಸೆಲೆಬ್ರೇಷನ್ ನಿಲ್ಲಿಸಬೇಕಾಗಿತ್ತು. ಅಭಿಮಾನಿಗಳು ಬರೋವಾಗ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಯೋಚನೆ ಮಾಡಬೇಕಾಗಿತ್ತು.
ಹೈಕೋರ್ಟ್ ಗೆ ಸುಮೊಟೋ ಕೇಸ್ ಮಾಡುವ ಎಲ್ಲಾ ಹಕ್ಕಿದೆ, ಅದೇ ಥರ ಎಲ್ಲದರಲ್ಲೂ ಮಾಡಿದರೆ ಒಳ್ಳೆಯದು. ಹನ್ನೊಂದು ಜನರ ಸಾವಿಗೆ ಯಾರು ಹೊಣೆ ಅಂತ ಸರ್ಕಾರ ಹೇಳಬೇಕು. ಇದು ಸರ್ಕಾರ ನಡೆಸಿರೋ ಕ್ರಿಕೆಟ್ ಅಲ್ಲ. ವಿಧಾನಸೌಧ ಬಳಿ ಯಾವುದೇ ಘಟನೆ ಆಗಿಲ್ಲ. ಇನ್ಜು ಸ್ಟೇಡಿಯಂನವರು ಕಾರ್ಯಕ್ರಮ ನಡೆಸುವಾಗ ಸ್ವಲ್ಪ ಯೋಚನೆ ಮಾಡಿ ನಡೆಸಬೇಕಿತ್ತು. ಅಮಾಯಕರು, ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಹೊರಬೇಕು ಎಂದು ಹೇಳಿದರು.
B K Hariprasad in Mangalore Demands Rs 1 Crore Compensation from BCCI for Each Victim of IPL Celebration Tragedy
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm