ಬ್ರೇಕಿಂಗ್ ನ್ಯೂಸ್
05-06-25 03:56 pm Mangaluru Staff ಕರಾವಳಿ
ಮಂಗಳೂರು, ಜೂನ್ 4: ಇಡೀ ರಾಜ್ಯದಲ್ಲಿ ಶಾಂತಿ ನೆಲೆಸಿರೋವಾಗ ಕರಾವಳಿಯಲ್ಲಿ ಯಾಕೆ ಹೀಗಾಗ್ತಿದೆ ಅನ್ನೋದನ್ನ ನೋಡಬೇಕಿದೆ. ಅಮಾಯಕರನ್ನ ಹೋಗಿ ಸಾಯಿಸೋಕೆ ಇದು ಉತ್ತರಪ್ರದೇಶ, ಮಣಿಪುರ ಅಲ್ಲ. ಮಂಗಳೂರಿಗೆ ಒಳ್ಳೆಯ ಹೆಸರಿದೆ, ಮಣಿಪುರ ಮಾಡಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷದ ಹತ್ಯೆ, ಕಾಂಗ್ರೆಸಿನಲ್ಲಿ ಮುಸ್ಲಿಂ ಮುಖಂಡರ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಂ ಮುಖಂಡರು ರಾಜೀನಾಮೆ ವಾಪಸ್ ಪಡೆಯವಂತೆ ಮನವಿ ಮಾಡುತ್ತೇನೆ. ನಾನು ಯಾರೊಂದಿಗೂ ಸಭೆ ನಡೆಸಲು ಬಂದಿಲ್ಲ, ಪ್ರತೀ ಸಾರಿ ಬರುವಂತೆ ಯಥಾ ಪ್ರಕಾರ ಬಂದಿದ್ದೇನೆ. ಕೆಲವು ನಡೆಯಬಾರದ ಘಟನೆ ನಡೆದಿದೆ, ಯಾರೂ ದೃತಿಗೆಡೋದು ಬೇಡ ಅಂತ ಮಾತನಾಡಿಸಿಕೊಂಡು ಹೋಗಲು ಬಂದಿದ್ದೇನೆ ಎಂದರು.
ನಿಮ್ಮನ್ನು ಜಿಲ್ಲೆಯ ಉಸ್ತುವಾರಿ ಮಾಡ್ತಾರೆಯೇ, ನಿಮ್ಮನ್ನು ಸಿಎಂ ಭೇಟಿಯಾದ ಉದ್ದೇಶವೇನು ಎಂಬ ಪ್ರಶ್ನೆಗೆ, ಉಸ್ತುವಾರಿ ಮಾಡ್ತಾರೆ ಅನ್ನೋ ಊಹಾಪೋಹಗಳನ್ನ ಬಿಟ್ಟು ಬಿಡಿ. ಮುಖ್ಯಮಂತ್ರಿಗಳು ಮತ್ರು ನನ್ನ ನಡುವಿನದ್ದು ಸೌಜನ್ಯದ ಭೇಟಿ, ಮಂಗಳೂರನ್ನ ಮಣಿಪುರ ಮಾಡಬೇಡಿ ಅಂತ ಹೇಳೋದಷ್ಟಕ್ಕೆ ಸೀಮಿತ ಆಗಿತ್ತು. ಕೊಲೆ, ಕೋಮು ದ್ವೇಷದ ಬಗ್ಗೆ ಕ್ರಮ ತಗೊಳ್ಳಿ ಅಂದಾಗ ಅವರೇ ಸ್ವಲ್ಪ ಹದಗೆಟ್ಟಿದೆ ಸರಿ ಮಾಡ್ತೀವಿ ಅಂದರು. ನೀವು ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಬಳಿ ಮಾತನಾಡಿ ಎಂದು ಹೇಳಿ ಕಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ದೃತಿಗೆಡಬೇಡಿ. ನಾವು ಸಂವಿಧಾನ ಮತ್ತು ನ್ಯಾಯದ ಪರ ಇದೀವಿ, ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಲು ಬಂದಿದ್ದೇನೆ. ಮುಂದೆ ಹೆಜ್ಜೆ ಇಟ್ಟು ರಾಜೀನಾಮೆ ನೀಡಿ ಹಿಂದೆ ಸರಿಯೋದು ಬೇಕಾಗಿಲ್ಲ, ವಾಪಾಸ್ ತೆಗೋಳಿ. ಯಾರು ಸಹ ಉಗ್ರವಾಗಿ ಯೋಚನೆ ಮಾಡೋದು ಕೂಡ ಬೇಕಾಗಿಲ್ಲ. ಮಂಗಳೂರಿಗೆ ಕರ್ನಾಟಕದಲ್ಲಿ ಒಳ್ಳೆಯ ಹೆಸರಿದೆ, ಅದನ್ನ ಮಣಿಪುರ ಮಾಡೋದು ಬೇಡ.
ನಾನು ಎಲ್ಲರಿಗೂ ಮಾತನಾಡಿಸ್ತೀನಿ, ಕಾಂಗ್ರೆಸ್ ಪಕ್ಷದಲ್ಲಿ ಯಾರನ್ನು ಕಳೆದುಕೊಳ್ಳಲು ತಯಾರಿಲ್ಲ. ಯಾವುದೋ ಭಾವನಾತ್ಮಕವಾಗಿ ಮನಸ್ಸಿಗೆ ನೋವಾದಾಗ ರಾಜೀನಾಮೆ ಕೊಟ್ಟಿದ್ದಾರೆ. ಎಲ್ಲರಿಗೂ ರಾಜೀನಾಮೆ ವಾಪಸ್ ಪಡೆಯಲು ಮನವಿ ಮಾಡ್ತೇನೆ. ಸರ್ಕಾರ ಜೊತೆಗಿರುವಾಗ ನಾವು ಕೆಲಸ ಮಾಡಿಲ್ಲ ಅಂದ್ರೆ ರಾಜೀನಾಮೆ ಕೊಡಬೇಕು. ನಾವು ಸೈದ್ದಾಂತಿಕವಾಗಿ ಬಹಳ ದೃಢವಾಗಿ ಇದ್ದಂಥವರು. ನಮ್ಮ ಸಿದ್ಧಾಂತಕ್ಕೆ ದಕ್ಕೆಯಾದಾಗ ಯಾರೂ ಸಹ ಹಾಗೆ ಮಾಡಬಹುದು.
ಇದರಲ್ಲಿ ಇರೋ ಪಾತ್ರಧಾರಿಗಳು ಮತ್ತು ಅವರ ಕುಟುಂಬದವರು ಪಾಪದವರು. ಸೂತ್ರಧಾರಿಗಳು ಯಾರ ಕೈಗೂ ಸಿಗದೇ ತಪ್ಪಿಸಿಕೊಳ್ತಾ ಇದಾರೆ. ಸೂತ್ರಧಾರಿಗಳ ಕೈಗೊಂಬೆಯಾಗಿ ನಮ್ಮ ಪಾತ್ರಧಾರಿಗಳು ಪ್ರಾಣ ಕಳೆದುಕೊಳ್ತಾ ಇದಾರೆ. ಸ್ವಲ್ಪ ದಿವಸದಲ್ಲಿ ಸೂತ್ರಧಾರಿಗಳು ಯಾರ್ಯಾರೆಂದು ನಾವು ಹೇಳ್ತೇವೆ. ಪೊಲೀಸರು ಒಳ್ಳೆಯ ಅಧಿಕಾರಿಗಳು ಇದಾರೆ, ಕ್ರಮ ಜರುಗಿಸ್ತಾರೆ. ಕಾನೂನು ಸುವ್ಯವಸ್ಥೆ ವಿಫಲ ಆದಾಗ ಸಿಎಂ ಮತ್ತು ಗೃಹ ಸಚಿವರು ಕ್ರಮ ಜರುಗಿಸಬೇಕಾಗುತ್ತದೆ. ಇದೊಂಥರ ಸೂಕ್ಷ್ಮ ಪ್ರದೇಶ ಆದ ಕಾರಣ ಬಹಳ ಯೋಚನೆ ಮಾಡಿ ಹೆಜ್ಜೆ ಇಟ್ಟಿದ್ದಾರೆ. ಎಲ್ಲಾ ಸರಿಯಾಗುತ್ತೆ, ಏನೂ ತೊಂದರೆ ಇಲ್ಲ, ನಾನಾದ್ರೂ ಅವರ ಪರ ನಿಲ್ತೀನಿ ಎಂದು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಬಿ.ಕೆ ಹರಿಪ್ರಸಾದ್ ಹೇಳಿದರು
Mangalore Has a Good Reputation, Don’t Turn It Into Manipur, BK Hariprasad Urges Congress Workers Not to Lose Heart
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm