ಬ್ರೇಕಿಂಗ್ ನ್ಯೂಸ್
05-06-25 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 5 : ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಪ್ರಾರಂಭಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ.
ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ದೃಷ್ಟಿಯಿಂದ ದೇಶ -ವಿದೇಶಗಳಿಂದಲೂ ಸಾವಿರಾರು ಜನ ಪ್ರತಿನಿತ್ಯ ನಗರಕ್ಕೆ ಭೇಟಿ ನೀಡುತ್ತಾರೆ. ಮಂಗಳೂರು ನಗರದ ಕೇಂದ್ರ ಭಾಗದಲ್ಲಿರುವ ಬಸ್ ನಿಲ್ದಾಣವು 1980ರಲ್ಲಿ ಮಂಜೂರಾಗಿ 83ರಲ್ಲಿ ಅಂದಾಜು 60 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿರುತ್ತದೆ. ಪ್ರಸ್ತುತ ಬಸ್ ನಿಲ್ದಾಣವು 3 ಎಕರೆ 60 ಸೆಂಟ್ಸ್ ವಿಸ್ತೀರ್ಣದ ಪ್ರದೇಶವನ್ನು ಹೊಂದಿದ್ದು, 4702.94 ಚ. ಮೀ ವಿಸ್ತೀರ್ಣದ ನಿಲ್ದಾಣ ಕಟ್ಟಡ, 814.82 ಚ. ಮೀ ವಾಣಿಜ್ಯ ಪ್ರದೇಶ, 103 ಚ.ಮೀ ದ್ವಿಚಕ್ರ ವಾಹನ ಪಾರ್ಕಿಂಗ್, 608.50 ಚ. ಮೀ ಕಾರ್ ಪಾರ್ಕಿಂಗ್, 171.92 ಚ. ಮೀ ರಿಕ್ಷಾ ನಿಲ್ದಾಣ, 1564.82 ಚ.ಮೀ ವಿಶ್ರಾಂತಿ ಕೊಠಡಿಗಳ ಸಾಮರ್ಥ್ಯ ಹೊಂದಿದೆ. ಕಳೆದ 39 ವರ್ಷಗಳಲ್ಲಿ ಅಲ್ಪ ಸ್ವಲ್ಪ ಅನುದಾನದಿಂದ ನಿಲ್ದಾಣವನ್ನು ನಿರ್ವಹಣೆ ಮಾಡಲಾಗಿದೆಯೇ ಹೊರತು ಆಧುನಿಕ ಸೌಲಭ್ಯಗಳೊಂದಿಗೆ ಉನ್ನತೀಕರಿಸುವ ಯಾವುದೇ ಪ್ರಯತ್ನಗಳಾಗಿರುವುದಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ನಿಲ್ದಾಣಕ್ಕೆ ಪ್ರತಿನಿತ್ಯ ವಿವಿಧ ವಿಭಾಗಗಳಿಂದ ಅಂದಾಜು 515 ಬಸ್ಗಳು ಬಂದು ಹೋಗುತ್ತಿದ್ದು, ಸರಿಸುಮಾರು 25 ಸಾವಿರ ಪ್ರಯಾಣಿಕರು ನಿತ್ಯ ನಿಲ್ದಾಣವನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅವಲಂಬಿಸಿದ್ದಾರೆ.
ರಾಜ್ಯದ ಬೊಕ್ಕಸಕ್ಕೆ ವಿವಿಧ ಉದ್ಯಮಗಳ ಮೂಲಕ ಅತೀ ಹೆಚ್ಚು ತೆರಿಗೆ ಪಾವತಿಸುವ ಜನರು ಹಾಗೂ ಸಂಸ್ಥೆಗಳನ್ನು ಹೊಂದಿರುವ ನಗರಗಳಲ್ಲಿ ಒಂದಾಗಿರುವ ಮಂಗಳೂರಿನಲ್ಲಿ, ಕಾಲಮಾನಕ್ಕೆ ತಕ್ಕಂತೆ ನಿಲ್ದಾಣದ ಸಾಮರ್ಥ್ಯವನ್ನು ಮೇಲ್ದರ್ಜೆಗೇರಿಸಿ, ಇತರೇ ರಾಜ್ಯದಲ್ಲಿರುವಂತೆ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಿಸಬೇಕೆಂಬುದು ಮಂಗಳೂರಿನ ನಿವಾಸಿಗಳ ಹಾಗೂ ಪಕ್ಷದ ಮುಖಂಡರ ಆಗ್ರಹವಾಗಿದೆ. ಆದ್ದರಿಂದ ಮಂಗಳೂರು ಬಸ್ ನಿಲ್ದಾಣವನ್ನು ಇತರೇ ಜಿಲ್ಲೆಯಲ್ಲಿರುವಂತೆ, ಅಂದಾಜು 120 ಕೋಟಿ ರೂಪಾಯಿ ಅನುದಾನದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸುವುದರ ಜೊತೆಗೆ ನಗರದಲ್ಲಿ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಪ್ರಾರಂಭಿಸಬೇಕಾಗಿ ಈ ಮೂಲಕ ತಮ್ಮನ್ನು ಮನವಿ ಮಾಡುವುದಾಗಿ ಭಂಡಾರಿ ಹೇಳಿದ್ದಾರೆ.
Manjunath Bhandari Urges Transport Minister to Upgrade Mangaluru Bus Stand into Hi Tech Hub and Introduce Electric Buses.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm