ಬ್ರೇಕಿಂಗ್ ನ್ಯೂಸ್
06-06-25 05:33 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲು ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಎಸಿ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ.
ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡುವುದಕ್ಕೆ ಇರುವ ಮಾನದಂಡಗಳೇನು ಮತ್ತು ಪೊಲೀಸ್ ಇಲಾಖೆಯಲ್ಲಿ ಮಾಡಿಕೊಂಡಿರುವ ಆರೋಪ ಪಟ್ಟಿ ಅಥವಾ ಆ ಕುರಿತ ದಾಖಲೆ ಏನಿದೆ ಎಂದು ವಕೀಲರು ಉಪ ವಿಭಾಗಾಧಿಕಾರಿ ಮುಂದೆ ಪ್ರಶ್ನೆ ಮಾಡಿದ್ದಾರೆ. ಪುತ್ತಿಲ ಅವರಿಗೆ ನೀಡಿದ್ದ ನೋಟೀಸಿನಲ್ಲಿ ಕಳೆದ ಬಾರಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧಿಸಿದ್ದಾಗ, ಯೋಗಿ ಮತ್ತು ಮೋದಿಯವರ ಫೋಟೋ ಬಳಸಿದ್ದಕ್ಕಾಗಿ ಮಾಡಿದ್ದ ಕೇಸು, 2013ರಲ್ಲಿ ದಾಖಲಾಗಿದ್ದ ಕೇಸಿನ ವಿವರಗಳಿದ್ದವು. ಇವೆರಡೂ ಪ್ರಕರಣಗಳು ಕೋರ್ಟಿನಲ್ಲಿ ಖುಲಾಸೆಗೊಂಡಿವೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಎಸಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸಲು ಮುಂದಾಗಿಲ್ಲ. ಇದರಂತೆ, ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ. ಇದೇ ವೇಳೆ, ಇಂದು ಪುತ್ತೂರು ಎಸಿ ಕೋರ್ಟಿನಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
Setback for Mangalore Police in Arun Puthila Externment Case, AC Court Seeks Proper Documentation, Hearing Postponed.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm