ಬ್ರೇಕಿಂಗ್ ನ್ಯೂಸ್
06-06-25 07:20 pm Mangalore Correspondent ಕರಾವಳಿ
ಮಂಗಳೂರು, ಜೂ.6 : ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದ್ದು ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ಚೆಕ್ ವಿತರಿಸಿದರು.
ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಇಬ್ಬರು ಮೀನುಗಾರರಿಗಾಗಿ ಶೋಧ ಕಾರ್ಯ ಇನ್ನೂ ನಡೆಯುತ್ತಿದೆ. ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ತಿಳಿಸಿದರು. ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರರ ಕುಟುಂಬಗಳಿಗೆ ಇದುವರೆಗೆ 8 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ರಾಜ್ಯ ಸರಕಾರ ಇದನ್ನು 10 ಲಕ್ಷ ರೂ.ಗೆ ಏರಿಸಿದೆ ಎಂದು ಸಚಿವರು ತಿಳಿಸಿದರು.



ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಐವನ್ ಡಿಸೋಜಾ, ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್, ಜಂಟಿ ನಿರ್ದೇಶಕ ಸಿದ್ಧಯ್ಯ, ಉಪ ನಿರ್ದೇಶಕ ದಿಲೀಪ್ ಕುಮಾರ್, ಮೀನುಗಾರ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೀನುಗಾರರ ಸುರಕ್ಷತೆ ; ಸಚಿವರಿಂದ ಸಭೆ
ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನ ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.
Mangalore Minister Mankal Vaidya Visits Homes of Missing Bengre Fishermen, Hands Over 10 Lakh Compensation Cheques to Each Family.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm