ಬ್ರೇಕಿಂಗ್ ನ್ಯೂಸ್
06-06-25 07:20 pm Mangalore Correspondent ಕರಾವಳಿ
ಮಂಗಳೂರು, ಜೂ.6 : ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದ್ದು ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ಚೆಕ್ ವಿತರಿಸಿದರು.
ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಇಬ್ಬರು ಮೀನುಗಾರರಿಗಾಗಿ ಶೋಧ ಕಾರ್ಯ ಇನ್ನೂ ನಡೆಯುತ್ತಿದೆ. ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ತಿಳಿಸಿದರು. ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರರ ಕುಟುಂಬಗಳಿಗೆ ಇದುವರೆಗೆ 8 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ರಾಜ್ಯ ಸರಕಾರ ಇದನ್ನು 10 ಲಕ್ಷ ರೂ.ಗೆ ಏರಿಸಿದೆ ಎಂದು ಸಚಿವರು ತಿಳಿಸಿದರು.
ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಐವನ್ ಡಿಸೋಜಾ, ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್, ಜಂಟಿ ನಿರ್ದೇಶಕ ಸಿದ್ಧಯ್ಯ, ಉಪ ನಿರ್ದೇಶಕ ದಿಲೀಪ್ ಕುಮಾರ್, ಮೀನುಗಾರ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೀನುಗಾರರ ಸುರಕ್ಷತೆ ; ಸಚಿವರಿಂದ ಸಭೆ
ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನ ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.
Mangalore Minister Mankal Vaidya Visits Homes of Missing Bengre Fishermen, Hands Over 10 Lakh Compensation Cheques to Each Family.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm