ಬ್ರೇಕಿಂಗ್ ನ್ಯೂಸ್
07-06-25 12:08 pm Mangalore Correspondent ಕರಾವಳಿ
ಉಳ್ಳಾಲ, ಜೂ.7 : ಮನೆ ಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವೈದ್ಯನಾಥ ನಗರದ ಸುಶೀಲ ಮಡಿವಾಳ ಎಂಬವರ ಮನೆಯಲ್ಲಿ ರಾತ್ರಿ ಸುಮಾರು 10.30 ರ ವೇಳೆ ದುರ್ಘಟನೆ ಸಂಭವಿಸಿದೆ. ಸುಶೀಲಾ ಅವರ ಸಹೋದರನ ಮಗಳ ಮದುವೆಯ ಪ್ರಯುಕ್ತ ಮನೆ ಮಂದಿ ಮೆಹಂದಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ರಾತ್ರಿಯ ವೇಳೆ ಮನೆಯ ಹಂಚಿನ ಮೇಲ್ಛಾವಣಿಯಲ್ಲಿ ಬೆಂಕಿ ಕಾಣಿಸಿದ್ದನ್ನ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿ ಸುಶೀಲ ಅವರಿಗೆ ಕರೆ ಮಾಡಿ ಹೇಳಿದ್ದಾರೆ.




ಮೆಹೆಂದಿ ಕಾರ್ಯಕ್ರಮದಿಂದ ಸುಶೀಲ ಅವರ ಅಳಿಯ ಓಡಿ ಬಂದು ನೋಡಿದಾಗ ಮನೆಯ ಒಂದು ಕೊಠಡಿಯ ಮೇಲ್ಛಾವಣಿಯಲ್ಲಿ ಬೆಂಕಿ ಉರಿಯುತ್ತಿತ್ತು. ಕೂಡಲೇ ವಿದ್ಯುತ್ ಸಂಪರ್ಕದ ಮೈನ್ ಸ್ವಿಚ್ ಬಂದ್ ಮಾಡಲಾಗಿತ್ತು. ಸ್ಥಳೀಯರು ಸೇರಿ ಮನೆಯ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟರೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಉರಿದು ಹೋಗಿದೆ.
ಘಟನೆ ಸಂದರ್ಭದಲ್ಲಿ ಯುವಕನೋರ್ವ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಅಗ್ನಿ ಅವಘಡದಿಂದ ಮನೆಯ ಸೊತ್ತುಗಳು ಉರಿದು ಭಸ್ಮಗೊಂಡಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳವು ರಾತ್ರಿಯೇ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
Mangalore House Gutted in Fire Accident at Derlakatte While Family Attends Mehendi Ceremony.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm