ಬ್ರೇಕಿಂಗ್ ನ್ಯೂಸ್
07-06-25 12:08 pm Mangalore Correspondent ಕರಾವಳಿ
ಉಳ್ಳಾಲ, ಜೂ.7 : ಮನೆ ಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವೈದ್ಯನಾಥ ನಗರದ ಸುಶೀಲ ಮಡಿವಾಳ ಎಂಬವರ ಮನೆಯಲ್ಲಿ ರಾತ್ರಿ ಸುಮಾರು 10.30 ರ ವೇಳೆ ದುರ್ಘಟನೆ ಸಂಭವಿಸಿದೆ. ಸುಶೀಲಾ ಅವರ ಸಹೋದರನ ಮಗಳ ಮದುವೆಯ ಪ್ರಯುಕ್ತ ಮನೆ ಮಂದಿ ಮೆಹಂದಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ರಾತ್ರಿಯ ವೇಳೆ ಮನೆಯ ಹಂಚಿನ ಮೇಲ್ಛಾವಣಿಯಲ್ಲಿ ಬೆಂಕಿ ಕಾಣಿಸಿದ್ದನ್ನ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿ ಸುಶೀಲ ಅವರಿಗೆ ಕರೆ ಮಾಡಿ ಹೇಳಿದ್ದಾರೆ.




ಮೆಹೆಂದಿ ಕಾರ್ಯಕ್ರಮದಿಂದ ಸುಶೀಲ ಅವರ ಅಳಿಯ ಓಡಿ ಬಂದು ನೋಡಿದಾಗ ಮನೆಯ ಒಂದು ಕೊಠಡಿಯ ಮೇಲ್ಛಾವಣಿಯಲ್ಲಿ ಬೆಂಕಿ ಉರಿಯುತ್ತಿತ್ತು. ಕೂಡಲೇ ವಿದ್ಯುತ್ ಸಂಪರ್ಕದ ಮೈನ್ ಸ್ವಿಚ್ ಬಂದ್ ಮಾಡಲಾಗಿತ್ತು. ಸ್ಥಳೀಯರು ಸೇರಿ ಮನೆಯ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟರೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಉರಿದು ಹೋಗಿದೆ.
ಘಟನೆ ಸಂದರ್ಭದಲ್ಲಿ ಯುವಕನೋರ್ವ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಅಗ್ನಿ ಅವಘಡದಿಂದ ಮನೆಯ ಸೊತ್ತುಗಳು ಉರಿದು ಭಸ್ಮಗೊಂಡಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳವು ರಾತ್ರಿಯೇ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
Mangalore House Gutted in Fire Accident at Derlakatte While Family Attends Mehendi Ceremony.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am