ಬ್ರೇಕಿಂಗ್ ನ್ಯೂಸ್
07-06-25 05:37 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಅದೇ ಕಾಲೇಜಿನ ಪಿಜಿ ವಿದ್ಯಾರ್ಥಿನಿಯೊಬ್ಬಳನ್ನು ವಶಕ್ಕೆ ಪಡೆದಿದ್ದಾರೆ. ಬಾಂಬ್ ಬೆದರಿಕೆ ಬಗ್ಗೆ ದೂರು ನೀಡಿದವಳೇ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಭಾರತ ಮೂಲದ ಚಲಸಾನಿ ಮೋನಿಕಾ ಚೌಧರಿ ವಶಕ್ಕೆ ಪಡೆದ ವಿದ್ಯಾರ್ಥಿನಿಯಾಗಿದ್ದು ಈಕೆ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಳು. ಮೇ 4ರಂದು ಪಿಜಿ ವಿಷಯದಲ್ಲಿ ಸೆಮಿನಾರ್ ಮಂಡನೆ ಮಾಡುವುದಕ್ಕೆ ಟಾಸ್ಕ್ ಕೊಡಲಾಗಿತ್ತು. ಸೆಮಿನಾರ್ ತಪ್ಪಿಸುವುದಕ್ಕಾಗಿ ಮೋನಿಕಾ ಚೌಧರಿ ಅದೇ ದಿನ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿರುವುದಾಗಿ ಕಾಲೇಜು ಸಿಬಂದಿಗೆ ಸುಳ್ಳು ಹೇಳಿದ್ದಳು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.


ತನ್ನ ಮೊಬೈಲಿಗೆ ನಾಲ್ಕೈದು ಬಾರಿ ಕರೆ ಮಾಡಿ ಯಾರೋ ಬೆದರಿಕೆ ಒಡ್ಡಿದ್ದಾರೆಂದು ಹೇಳಿದ್ದಳು. ಆನಂತರ, ಕಾಲೇಜು ಆಡಳಿತದ ಸೂಚನೆಯಂತೆ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು. ಈಕೆಗೆ ಫೋನ್ ಕರೆ ಬಂದಿದ್ದರಿಂದ ವಿದ್ಯಾರ್ಥಿನಿಯನ್ನೇ ದೂರುದಾರಳೆಂದು ಗುರುತಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ಘಟನೆ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.
ಪೊಲೀಸರು ವಿದ್ಯಾರ್ಥಿನಿಯನ್ನು ತನಿಖೆ ನಡೆಸಿದಾಗ ಪೂರಕ ಲಭಿಸದ್ದರಿಂದ ಆಕೆಯ ಬಗ್ಗೆಯೇ ತನಿಖೆ ನಡೆಸಲಾಗಿತ್ತು. ಆಕೆ ಅಲ್ಲಿಯೇ ಪಿಜಿ ವ್ಯಾಸಂಗ ನಡೆಸುತ್ತಿರುವುದು ಮತ್ತು ಅದೇ ದಿನ ಸೆಮಿನಾರ್ ಇದ್ದ ಮಾಹಿತಿಯೂ ಲಭಿಸಿತ್ತು.
ಸೆಮಿನಾರ್ ಹಿಂದೆ ಹಾಕಲಿಕ್ಕಾಗಿ ಹೈದರಾಬಾದಿನ ಸ್ನೇಹಿತನ ಮೊಬೈಲ್ ಗೆ ಆಸ್ಪತ್ರೆಯ ಸ್ಥಿರ ದೂರವಾಣಿಗೆ ಕರೆ ಮಾಡುವಂತೆ ಮೆಸೇಜ್ ಹಾಕಿದ್ದಳು. ಮೆಸೇಜ್ ನೋಡಿ ಸ್ನೇಹಿತ ಕರೆ ಮಾಡಿದ್ದಾನೆ. ಆಸ್ಪತ್ರೆಯ ಸಿಬ್ಬಂದಿಗಳು ಯಾರ ಕರೆ ಎಂದು ಕೇಳಿದಾಗ ಬಾಂಬ್ ಬೆದರಿಕೆ ಎಂದು ಗುಳ್ಳೆಬ್ಬಿಸಿದ್ದಾಳೆ. ಆಕೆಯೇ ಉಳ್ಳಾಲ ಠಾಣೆಗೆ ದೂರು ನೀಡಿದ್ದಾಳೆ. ಕರೆ ಮಾಡಿದ ಸ್ನೇಹಿತ ಹೈದರಾಬಾದಿನಲ್ಲಿ ಐಟಿ ಕಂಪನಿ ಉದ್ಯೋಗಿಯಾಗಿದ್ದು ಆತನಿಗೆ ಯಾವುದೇ ವಿಚಾರ ತಿಳಿದಿಲ್ಲ ಎಂದು ಪೊಲೀಸರ ಕಡೆಯಿಂದ ತಿಳಿದುಬಂದಿದೆ.
ಸುಳ್ಳು ಮಾಹಿತಿ ನೀಡಿದ್ದಾಗಿ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಕಣಚೂರು ಆಸ್ಪತ್ರೆಯಲ್ಲಿ ಶೋಧ ನಡೆಸಿದ್ದರು. ಶೋಧ ಬಳಿಕ ಯಾವುದೇ ಸುಳಿವು ಸಿಗದ ಕಾರಣ ಹುಸಿ ಬಾಂಬ್ ಎಂದು ಸಾಬೀತಾಗಿತ್ತು.
Mangalore PG Student Arrested for Fake Bomb Threat at Kanachur Medical College, Police Say She Made the Call to Avoid Seminar.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am