ಬ್ರೇಕಿಂಗ್ ನ್ಯೂಸ್
07-06-25 05:37 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಅದೇ ಕಾಲೇಜಿನ ಪಿಜಿ ವಿದ್ಯಾರ್ಥಿನಿಯೊಬ್ಬಳನ್ನು ವಶಕ್ಕೆ ಪಡೆದಿದ್ದಾರೆ. ಬಾಂಬ್ ಬೆದರಿಕೆ ಬಗ್ಗೆ ದೂರು ನೀಡಿದವಳೇ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಭಾರತ ಮೂಲದ ಚಲಸಾನಿ ಮೋನಿಕಾ ಚೌಧರಿ ವಶಕ್ಕೆ ಪಡೆದ ವಿದ್ಯಾರ್ಥಿನಿಯಾಗಿದ್ದು ಈಕೆ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಳು. ಮೇ 4ರಂದು ಪಿಜಿ ವಿಷಯದಲ್ಲಿ ಸೆಮಿನಾರ್ ಮಂಡನೆ ಮಾಡುವುದಕ್ಕೆ ಟಾಸ್ಕ್ ಕೊಡಲಾಗಿತ್ತು. ಸೆಮಿನಾರ್ ತಪ್ಪಿಸುವುದಕ್ಕಾಗಿ ಮೋನಿಕಾ ಚೌಧರಿ ಅದೇ ದಿನ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿರುವುದಾಗಿ ಕಾಲೇಜು ಸಿಬಂದಿಗೆ ಸುಳ್ಳು ಹೇಳಿದ್ದಳು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.


ತನ್ನ ಮೊಬೈಲಿಗೆ ನಾಲ್ಕೈದು ಬಾರಿ ಕರೆ ಮಾಡಿ ಯಾರೋ ಬೆದರಿಕೆ ಒಡ್ಡಿದ್ದಾರೆಂದು ಹೇಳಿದ್ದಳು. ಆನಂತರ, ಕಾಲೇಜು ಆಡಳಿತದ ಸೂಚನೆಯಂತೆ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು. ಈಕೆಗೆ ಫೋನ್ ಕರೆ ಬಂದಿದ್ದರಿಂದ ವಿದ್ಯಾರ್ಥಿನಿಯನ್ನೇ ದೂರುದಾರಳೆಂದು ಗುರುತಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ಘಟನೆ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.
ಪೊಲೀಸರು ವಿದ್ಯಾರ್ಥಿನಿಯನ್ನು ತನಿಖೆ ನಡೆಸಿದಾಗ ಪೂರಕ ಲಭಿಸದ್ದರಿಂದ ಆಕೆಯ ಬಗ್ಗೆಯೇ ತನಿಖೆ ನಡೆಸಲಾಗಿತ್ತು. ಆಕೆ ಅಲ್ಲಿಯೇ ಪಿಜಿ ವ್ಯಾಸಂಗ ನಡೆಸುತ್ತಿರುವುದು ಮತ್ತು ಅದೇ ದಿನ ಸೆಮಿನಾರ್ ಇದ್ದ ಮಾಹಿತಿಯೂ ಲಭಿಸಿತ್ತು.
ಸೆಮಿನಾರ್ ಹಿಂದೆ ಹಾಕಲಿಕ್ಕಾಗಿ ಹೈದರಾಬಾದಿನ ಸ್ನೇಹಿತನ ಮೊಬೈಲ್ ಗೆ ಆಸ್ಪತ್ರೆಯ ಸ್ಥಿರ ದೂರವಾಣಿಗೆ ಕರೆ ಮಾಡುವಂತೆ ಮೆಸೇಜ್ ಹಾಕಿದ್ದಳು. ಮೆಸೇಜ್ ನೋಡಿ ಸ್ನೇಹಿತ ಕರೆ ಮಾಡಿದ್ದಾನೆ. ಆಸ್ಪತ್ರೆಯ ಸಿಬ್ಬಂದಿಗಳು ಯಾರ ಕರೆ ಎಂದು ಕೇಳಿದಾಗ ಬಾಂಬ್ ಬೆದರಿಕೆ ಎಂದು ಗುಳ್ಳೆಬ್ಬಿಸಿದ್ದಾಳೆ. ಆಕೆಯೇ ಉಳ್ಳಾಲ ಠಾಣೆಗೆ ದೂರು ನೀಡಿದ್ದಾಳೆ. ಕರೆ ಮಾಡಿದ ಸ್ನೇಹಿತ ಹೈದರಾಬಾದಿನಲ್ಲಿ ಐಟಿ ಕಂಪನಿ ಉದ್ಯೋಗಿಯಾಗಿದ್ದು ಆತನಿಗೆ ಯಾವುದೇ ವಿಚಾರ ತಿಳಿದಿಲ್ಲ ಎಂದು ಪೊಲೀಸರ ಕಡೆಯಿಂದ ತಿಳಿದುಬಂದಿದೆ.
ಸುಳ್ಳು ಮಾಹಿತಿ ನೀಡಿದ್ದಾಗಿ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಕಣಚೂರು ಆಸ್ಪತ್ರೆಯಲ್ಲಿ ಶೋಧ ನಡೆಸಿದ್ದರು. ಶೋಧ ಬಳಿಕ ಯಾವುದೇ ಸುಳಿವು ಸಿಗದ ಕಾರಣ ಹುಸಿ ಬಾಂಬ್ ಎಂದು ಸಾಬೀತಾಗಿತ್ತು.
Mangalore PG Student Arrested for Fake Bomb Threat at Kanachur Medical College, Police Say She Made the Call to Avoid Seminar.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm