ಬ್ರೇಕಿಂಗ್ ನ್ಯೂಸ್
22-12-20 10:52 am Mangalore Correspondent ಕರಾವಳಿ
ಮಂಗಳೂರು, ಡಿ.22 : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಮೂಲತಃ ಕೆಳಿಂಜಾರು ನಿವಾಸಿ, ಪ್ರಸ್ತುತ ಕಲ್ಲಡ್ಕದ ನಿವಾಸಿಯಾಗಿರುವ ಮುಹಮ್ಮದ್ ಇರ್ಷಾದ್(30) ಮತ್ತು ಬಂಟ್ವಾಳ ಪುದು ನಿವಾಸಿ ಸದ್ದಾಂ ಹುಸೇನ್(30) ಶಿಕ್ಷೆಗೊಳಗಾದವರು.
2018ರ ಮೇ 30ರ ಮಧ್ಯರಾತ್ರಿ ದರೋಡೆಗೆ ಸಂಚು ಹೂಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಿ.ಸಿ.ರೋಡ್- ಬೆಳ್ತಂಗಡಿ ರಸ್ತೆಯ ಮಣಿಹಳ್ಳ ಜಂಕ್ಷನ್ನಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಐ ಪ್ರಸನ್ನ ಎಂ.ಎಸ್. ಹಾಗೂ 5 ಮಂದಿ ಪೊಲೀಸ್ ಸಿಬ್ಬಂದಿ ತಪಾಸಣೆಯಲ್ಲಿ ನಿರತರಾಗಿದ್ದರು.
ಈ ವೇಳೆ ಆಗಮಿಸಿದ ಕಾರೊಂದು ಪೊಲೀಸರಿಗೆ ಡಿಕ್ಕಿಯಾಗಿ ಪರಾರಿಯಾಗಲು ಮುಂದಾಗಿದ್ದು ಪೊಲೀಸರು ಕಾರಿನ ಚಕ್ರಕ್ಕೆ ಗುಂಡು ಹಾರಿಸಿದ್ದರು. ಕಾರು ಪಕ್ಕದ ತೋಡಿಗೆ ಬಿದ್ದಿತ್ತು. ಈ ವೇಳೆ, ಅದರಲ್ಲಿದ್ದ ಇಬ್ಬರು ಓಡಿ ತಪ್ಪಿಸಿಕೊಂಡಿದ್ದರೆ, ಮತ್ತಿಬ್ಬರು ಪೊಲೀಸರ ಮೇಲೆ ತಲವಾರು ದಾಳಿಗೆ ಮುಂದಾಗಿದ್ದರು. ಬಳಿಕ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಕಾರನ್ನು ತಪಾಸಣೆ ನಡೆಸಿದಾಗ ತಲವಾರು, ಮೆಣಸಿನ ಹುಡಿ, ಮಂಕಿ ಕ್ಯಾಪ್, ಹಗ್ಗ ಮೊದಲಾದವು ಪತ್ತೆಯಾಗಿದ್ದವು. ಆರೋಪಿಗಳ ವಿರುದ್ಧ ದರೋಡೆಗೆ ಸಿದ್ಧತೆ ನಡೆಸಿರುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆಯತ್ನ ಪ್ರಕರಣ ದಾಖಲಾಗಿದ್ದವು. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಐ ಪ್ರಸನ್ನ ಎಂ.ಎಸ್. ಪ್ರಕರಣ ದಾಖಲಿಸಿಕೊಂಡಿದ್ದರು. ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಟಿ.ಪಿ.ರಾಮಲಿಂಗೇ ಗೌಡ ಕರ್ತವ್ಯಕ್ಕೆ ಅಡ್ಡಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ 3,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಒಂದು ತಿಂಗಳು ಹೆಚ್ಚುವರಿ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಇಬ್ಬರು ಆರೋಪಿಗಳು ಸಾಕ್ಷಾಧಾರ ಕೊರತೆಯ ಹಿನ್ನೆಲೆಯಲ್ಲಿ ಖುಲಾಸೆಗೊಂಡಿದ್ದಾರೆ. ಓರ್ವ ಆರೋಪಿ ಮುಹಮ್ಮದ್ ಮುಕ್ಸಿನ್ ವಿಚಾರಣೆಯ ಕೊನೆಯ ಹಂತದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ಪ್ರತ್ಯೇಕ ಪ್ರಕರಣ ಮುಂದುವರಿಯಲಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದ್ಯಾವರ ವಾದಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm