ಬ್ರೇಕಿಂಗ್ ನ್ಯೂಸ್
22-12-20 10:52 am Mangalore Correspondent ಕರಾವಳಿ
ಮಂಗಳೂರು, ಡಿ.22 : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಮೂಲತಃ ಕೆಳಿಂಜಾರು ನಿವಾಸಿ, ಪ್ರಸ್ತುತ ಕಲ್ಲಡ್ಕದ ನಿವಾಸಿಯಾಗಿರುವ ಮುಹಮ್ಮದ್ ಇರ್ಷಾದ್(30) ಮತ್ತು ಬಂಟ್ವಾಳ ಪುದು ನಿವಾಸಿ ಸದ್ದಾಂ ಹುಸೇನ್(30) ಶಿಕ್ಷೆಗೊಳಗಾದವರು.
2018ರ ಮೇ 30ರ ಮಧ್ಯರಾತ್ರಿ ದರೋಡೆಗೆ ಸಂಚು ಹೂಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಿ.ಸಿ.ರೋಡ್- ಬೆಳ್ತಂಗಡಿ ರಸ್ತೆಯ ಮಣಿಹಳ್ಳ ಜಂಕ್ಷನ್ನಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಐ ಪ್ರಸನ್ನ ಎಂ.ಎಸ್. ಹಾಗೂ 5 ಮಂದಿ ಪೊಲೀಸ್ ಸಿಬ್ಬಂದಿ ತಪಾಸಣೆಯಲ್ಲಿ ನಿರತರಾಗಿದ್ದರು.
ಈ ವೇಳೆ ಆಗಮಿಸಿದ ಕಾರೊಂದು ಪೊಲೀಸರಿಗೆ ಡಿಕ್ಕಿಯಾಗಿ ಪರಾರಿಯಾಗಲು ಮುಂದಾಗಿದ್ದು ಪೊಲೀಸರು ಕಾರಿನ ಚಕ್ರಕ್ಕೆ ಗುಂಡು ಹಾರಿಸಿದ್ದರು. ಕಾರು ಪಕ್ಕದ ತೋಡಿಗೆ ಬಿದ್ದಿತ್ತು. ಈ ವೇಳೆ, ಅದರಲ್ಲಿದ್ದ ಇಬ್ಬರು ಓಡಿ ತಪ್ಪಿಸಿಕೊಂಡಿದ್ದರೆ, ಮತ್ತಿಬ್ಬರು ಪೊಲೀಸರ ಮೇಲೆ ತಲವಾರು ದಾಳಿಗೆ ಮುಂದಾಗಿದ್ದರು. ಬಳಿಕ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಕಾರನ್ನು ತಪಾಸಣೆ ನಡೆಸಿದಾಗ ತಲವಾರು, ಮೆಣಸಿನ ಹುಡಿ, ಮಂಕಿ ಕ್ಯಾಪ್, ಹಗ್ಗ ಮೊದಲಾದವು ಪತ್ತೆಯಾಗಿದ್ದವು. ಆರೋಪಿಗಳ ವಿರುದ್ಧ ದರೋಡೆಗೆ ಸಿದ್ಧತೆ ನಡೆಸಿರುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆಯತ್ನ ಪ್ರಕರಣ ದಾಖಲಾಗಿದ್ದವು. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಐ ಪ್ರಸನ್ನ ಎಂ.ಎಸ್. ಪ್ರಕರಣ ದಾಖಲಿಸಿಕೊಂಡಿದ್ದರು. ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಟಿ.ಪಿ.ರಾಮಲಿಂಗೇ ಗೌಡ ಕರ್ತವ್ಯಕ್ಕೆ ಅಡ್ಡಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ 3,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಒಂದು ತಿಂಗಳು ಹೆಚ್ಚುವರಿ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಇಬ್ಬರು ಆರೋಪಿಗಳು ಸಾಕ್ಷಾಧಾರ ಕೊರತೆಯ ಹಿನ್ನೆಲೆಯಲ್ಲಿ ಖುಲಾಸೆಗೊಂಡಿದ್ದಾರೆ. ಓರ್ವ ಆರೋಪಿ ಮುಹಮ್ಮದ್ ಮುಕ್ಸಿನ್ ವಿಚಾರಣೆಯ ಕೊನೆಯ ಹಂತದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ಪ್ರತ್ಯೇಕ ಪ್ರಕರಣ ಮುಂದುವರಿಯಲಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದ್ಯಾವರ ವಾದಿಸಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm