ಬ್ರೇಕಿಂಗ್ ನ್ಯೂಸ್
09-06-25 11:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 9 : ಕೇರಳದ ಕೊಚ್ಚಿಯ ಬೇಪೂರ್ ಸಮುದ್ರ ತೀರದಿಂದ 78 ನಾಟಿಕಲ್ ಮೈಲು ದೂರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದರಲ್ಲಿದ್ದ 18 ಮಂದಿಯನ್ನು ನೌಕಾಪಡೆ ಮತ್ತು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ನಾಲ್ವರು ಸಿಬಂದಿ ನಾಪತ್ತೆಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.
ಐವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ ಇದೆಯೆಂದು ಅಧಿಕಾರಿಗಳು ತಿಳಿಸಿದ್ದು, ಅವರನ್ನು ಐಎನ್ಎಸ್ ಸೂರತ್ ಶಿಪ್ ಮೂಲಕ ಪಣಂಬೂರು ಬಂದರಿಗೆ ತರಲಾಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಯಿದೆ. ಎಂವಿ ವ್ಯಾನ್ ಹೈ 503 ಹೆಸರಿನ ಸಿಂಗಾಪುರದ ಕಂಟೇನರ್ ಹಡಗು ಶ್ರೀಲಂಕಾದ ಕೊಲಂಬೋದಿಂದ ಮುಂಬೈ ತೆರಳುತ್ತಿದ್ದಾಗ ಕೇರಳ ಸಮುದ್ರ ತೀರದಲ್ಲಿ ದುರಂತಕ್ಕೀಡಾಗಿದೆ.
ಕೊಲಂಬೋದಿಂದ ಹಡಗು ಹೊರಟಿದ್ದಾಗ ಒಟ್ಟು 22 ಸಿಬಂದಿ ಇದ್ದರು. ಎಂಟು ಚೈನಾ, ನಾಲ್ಕು ತೈವಾನ್, ನಾಲ್ಕು ಮ್ಯಾನ್ಮಾರ್, ಇಬ್ಬರು ಇಂಡೋನೇಶ್ಯಾ ಮೂಲದವರು ಇದ್ದರು. ಈಗ 18 ಸಿಬಂದಿಯನ್ನು ರಕ್ಷಣೆ ಮಾಡಲಾಗಿದ್ದು ನಾಲ್ಕು ಮಂದಿ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಅವರ ರಕ್ಷಣೆಗಾಗಿ ಹುಡುಕಾಟ ಮುಂದುವರಿದಿದೆ. ಮಂಗಳೂರು ಕೋಸ್ಟ್ ಗಾರ್ಡ್ ಪಡೆಯ ಐಸಿಜಿಎಸ್ ರಾಜದೂತ್, ಕೊಚ್ಚಿಯ ಐಸಿಜಿಎಸ್ ಅರ್ನ್ವೇಶ್, ಅಗತ್ತಿಯ ಐಸಿಜಿಎಸ್ ಸಾಚೆಟ್ ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ನಾಪತ್ತೆಯಾದವರಲ್ಲಿ ಇಬ್ಬರು ತೈವಾನ್, ಒಬ್ಬ ಇಂಡೋನೇಶ್ಯಾ ಮತ್ತು ಇನ್ನೊಬ್ಬ ಮ್ಯಾನ್ಮಾರ್ ಮೂಲದವರು ಇದ್ದಾರೆ. ಹಡಗಿನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಎರಡನೇ ಹಡಗು ದುರಂತ
ಇತ್ತೀಚೆಗೆ ಮೇ 25ರಂದು ಕೇರಳ ಕರಾವಳಿಯಲ್ಲಿ ಲೈಬೀರಿಯಾ ಮೂಲದ 30 ವರ್ಷ ಹಳೆಯ ಬೃಹತ್ ಕಂಟೇನರ್ ಹಡಗು ಮುಳುಗಡೆಯಾಗಿತ್ತು. ಅದರಲ್ಲಿ 640 ಕಂಟೇನರ್ ಗಳಿದ್ದು, ಆ ಪೈಕಿ 12 ಕಂಟೇನರ್ ಗಳಲ್ಲಿ ಅತ್ಯಂತ ವಿಷಕಾರಿ ರಾಸಾಯನಿಕಗಳು ತುಂಬಿದ್ದವು. ಕೆಲವು ಕಂಟೇನರ್ ಗಳು ಕೇರಳ ಕರಾವಳಿ ದಡಕ್ಕೆ ತೇಲಿ ಬಂದಿದ್ದು ದಡಕ್ಕೆ ಬಡಿಯುತ್ತಲೇ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದ್ದವು. ಇದರಿಂದಾಗಿ ಕೇರಳದ ಕರಾವಳಿ ಸಮುದ್ರ ತೀರ ತೀವ್ರ ಮಲಿನಗೊಳ್ಳುವ ಆತಂಕ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಕಂಟೇನರ್ ಹಡಗು ದುರಂತಕ್ಕೀಡಾಗಿದೆ.
Fire Breaks Out on Singapore Container Ship Off Kerala Coast; 18 Crew Rescued, 4 Missing, Injured Brought to Mangalore by Coast Guard
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm