ಬ್ರೇಕಿಂಗ್ ನ್ಯೂಸ್
10-06-25 07:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ಪೊಲೀಸರ ವಿರುದ್ಧ ಆಂದೋಲನ ಮಾಡ್ತೀವಿ, ಬೀದಿಗೆ ಇಳಿಯುತ್ತೇವೆ, ಹಿಂದುಗಳನ್ನು ಮುಟ್ಟಿದರೆ ಜಾಗ್ರತೆ, ಗೂಂಡಾವರ್ತನೆ ಎಂದೆಲ್ಲಾ ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕರು ಜಿಲ್ಲೆಯ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಯತ್ನ ಮಾಡಿದ್ದಾರೆ. ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡ್ತಾರೆ, ಅದು ಬಿಟ್ಟು ನಿಮಗೆ ಬೇಕಾದಂತೆ ಕೆಲಸ ಮಾಡೋಕ್ಕಿರುವುದಲ್ಲ. ಯಾರ ಮೇಲೆ ಸುಳ್ಳು ಕೇಸು ಹಾಕಿದ್ದಾರೆ ಅಂತ ಆಧಾರ ಸಹಿತ ಹೇಳಲಿ. ಏನು ಬೇಕಾದ್ರೂ ಮಾತಾಡಿ ಹೋಗ್ತೀವಿ ಅಂದ್ರೆ ನಾವು ಒಪ್ಪುವುದಿಲ್ಲ. ಇದರ ಬಗ್ಗೆ ಕ್ರಮ ಆಗಬೇಕೆಂದು ಗೃಹ ಇಲಾಖೆಯನ್ನು ಆಗ್ರಹಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಗೃಹ ಸಚಿವರಾಗಿ ಕೆಲಸ ಮಾಡಿದವರು ಈ ರೀತಿ ಕ್ಷುಲ್ಲಕವಾಗಿ ಮಾತನಾಡಬಾರದು, ಪೊಲೀಸರು ಯಾರ ಮನೆಗೂ ಹೋಗಬಾರದು ಅಂತೀರಿ.. ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡುತ್ತಾರೆ, ಕಾನೂನು ಮೀರಿ ಮಾಡಿದ್ರೆ ನ್ಯಾಯಾಲಯ ಇದೆ, ಪ್ರಶ್ನೆ ಮಾಡಬಹುದು. ಅದು ಬಿಟ್ಟು ಪೊಲೀಸರಿಗೆ ಧಮ್ಕಿ ಹಾಕುವುದು ಸರಿಯಲ್ಲ.
ಕರಾವಳಿಯಲ್ಲಿ ಸುದೀರ್ಘ ಕಾಲ ಆಡಳಿತ ಮಾಡಿದ್ದು ಕಾಂಗ್ರೆಸ್. ಇಲ್ಲಿ ಶಾಂತಿ ಸ್ಥಾಪನೆಗಾಗಿ ಕೋಮು ನಿಗ್ರಹ ದಳ ಮಾಡಿದ್ರೆ ಅದನ್ನು ಪ್ರಶ್ನೆ ಮಾಡುತ್ತೀರಿ, ಅದನ್ನು ಮಾಡಿಲ್ಲಾಂದ್ರೆ ಅದ್ಯಾಕೆ ಮಾಡಿಲ್ಲ ಅಂತ ಕೇಳುತ್ತೀರಿ. ಬಿಜೆಪಿಗೆ ಸದಾ ಕರಾವಳಿಯಲ್ಲಿ ಗೊಂದಲ ಇರಬೇಕು, ಸೌಹಾರ್ದ ಇರಬಾರದು, ಇದರ ನಡುವೆ ಬೇಳೆ ಬೇಯಿಸುವ ಕೆಲಸ ಆಗುತ್ತಿರಬೇಕು. ನಾವಿದಕ್ಕೆ ಅವಕಾಶ ಕೊಡಲ್ಲ ಎಂದರು.
ಮಂಗಳೂರಿನ ಸಂಸದರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಯಾಕೆ ಎನ್ಐಎಗೆ ಕೊಡಿಸಿದ್ದಾರೆ. ಜಿಲ್ಲೆಯ ಬಗ್ಗೆ ಕಾಳಜಿ ಇರುತ್ತಿದ್ದರೆ ಅಶ್ರಫ್, ಅಬ್ದುಲ್ ರಹಿಮಾನ್ ಕೇಸನ್ನೂ ಕೊಡಿಸಬೇಕಿತ್ತು. ಈ ಕುರಿತ ಆದೇಶದಲ್ಲಿ ಆರೋಪಿಗಳಿಗೆ ಪಿಎಫ್ಐ ಸಂಪರ್ಕದ ಅನುಮಾನ ಇದೆಯೆಂದು ಹೇಳಿದೆ. ಕೇವಲ ಅನುಮಾನದ ಮೇಲೆ ತನಿಖೆಗೆ ಆದೇಶ ನೀಡುವುದಕ್ಕಾಗುತ್ತಾ.. ಯಾವ ಮಾನದಂಡದ ಮೇಲೆ ಅಂತ ಬೇಕಲ್ವಾ.. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದಕ್ಕೆ ಸುಣ್ಣ ಅಂತ ಯಾಕೆ ಮಾಡುತ್ತೀರಿ. ಪ್ರವೀಣ್ ನೆಟ್ಟಾರು ಕೊಲೆ ಬಳಿಕದ ಎಲ್ಲ ಕೋಮು ಆಧಾರಿತ ಹತ್ಯೆಗಳ ಬಗ್ಗೆಯೂ ಎನ್ಐಎ ತನಿಖೆ ಮಾಡಲಿ. ಸತ್ಯ ಏನೆಂದು ಹೊರಬರುತ್ತದೆ ಎಂದು ಹೇಳಿದರು.
ಎನ್ಐಎ ತನಿಖೆ ಕೊಡುವಾಗ ರಾಜ್ಯ ಸರಕಾರದ ಅನುಮತಿ ಪಡೆಯಬೇಕಿತ್ತು. ಅದನ್ನು ಮಾಡಿಲ್ಲ. ಇದಲ್ಲದೆ, ಈ ಎನ್ಐಎ ತನಿಖೆಯ ಅಗತ್ಯ ಮತ್ತು ಔಚಿತ್ಯದ ಬಗ್ಗೆ ಚರ್ಚೆಯಾಗಬೇಕಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದು ಐವಾನ್ ಡಿಸೋಜ ಹೇಳಿದರು.
Congress MLC Ivan D’Souza launched a sharp attack against BJP leaders on Monday, accusing them of attempting to demoralize the police force in Dakshina Kannada through provocative statements and threats.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am