ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am