ಬ್ರೇಕಿಂಗ್ ನ್ಯೂಸ್
11-06-25 07:03 pm Mangalore Correspondent ಕರಾವಳಿ
ಮಂಗಳೂರು, ಜೂ 11 : ಸಾಲು ಸಾಲು ಕೊಲೆಗಳು, ಗಲಭೆ-ಘರ್ಷಣೆಗಳಿಂದ ಕರಾವಳಿ ನಗರಿ ಬೂದಿ ಮುಚ್ಚಿದ ಕೆಂಡದಂತಿದೆ. ಜಿಲ್ಲೆಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ನಾನಾ ಕ್ರಮಕೈಗೊಂಡಿದೆ. ಇತ್ತ ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ಪೊಲೀಸರು ಶಾಕ್ ಕೊಡ್ತಿದ್ದು, ಬಾಯಿಗೆ ಬ್ರೇಕ್ ಹಾಕುವ ಕೆಲಸ ಮಾಡ್ತಿದ್ದಾರೆ. ಈ ನಿಟ್ಟಿನಲ್ಲಿ ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ ಎನ್ನಲಾಗ್ತಿದೆ.
ಚಕ್ರವರ್ತಿ ಸೂಲಿಬೆಲೆಗೆ ಕಾದಿದೆ ಶಾಕ್ !
ಇತ್ತೀಚಿಗಷ್ಟೇ ಪ್ರಚೋದಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಮೇಲೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ ಕೇಸ್ ದಾಖಲಾಗಿತ್ತು. ಇದೀಗ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ ಎನ್ನಲಾಗ್ತಿದೆ.
ಕಾನೂನು ಕ್ರಮಕ್ಕೆ ಖಾಕಿ ತಯಾರಿ;
ಚಿಂತಕ ಚಕ್ರವರ್ತಿ ಸೂಲಿಬೆಲೆ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿರು ಪೊಲೀಸ್ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಠಾಣೆಗಳಿಗೆ ಮಾಹಿತಿ ರವಾನೆ ಮಾಡಿದೆ. ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷರ ಪತ್ರ ಉಲ್ಲೇಖಿಸಿ ಮಾಹಿತಿ ಕೇಳಿದ ಡಿಜಿ ಕಚೇರಿ ಪತ್ರ ಕೂಡ ವೈರಲ್ ಆಗಿದೆ.
ದೂರಿನ ಮಾಹಿತಿ ನೀಡಲು ಸೂಚನೆ
ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ 2022 ರಿಂದ 2025 ವರೆಗೆ ಇರುವ ಎಲ್ಲಾ ದೂರುಗಳ ಬಗ್ಗೆ ಮಾಹಿತಿ ನೀಡಲು ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಲಾಗಿದೆ. ವಾಕಿಟಾಕಿಯಲ್ಲಿ ಈ ಬಗ್ಗೆ ನೀಡಿದ ಸಂದೇಶದ ಆಡಿಯೋ ವೈರಲ್ ಆಗಿದೆ.
ಯುವ ಬ್ರಿಗೇಡ್ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಮ್ಮ ಮಾತುಗಳಿಂದಲೇ ಅನೇಕ ಬಾರಿ ವಿವಾದ ಕಿಡಿ ಹೊತ್ತಿಸಿದ ಉದಾಹರಣೆ ಇದೆ. ತಮ್ಮ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕೆಲ ಕೇಸ್ಗಳು ಕೂಡ ದಾಖಲಾಗಿದ್ದು ಇದೆ. ಇದೀಗ ಪೊಲೀಸರು ಯಾವ ವಿಚಾರಕ್ಕೆ, ಹೇಗೆ ಕ್ರಮಕೈಗೊಳ್ಳಲಿದ್ದಾರೆ ಅನ್ನೋದನ್ನು ಕಾದು ನೋಡಬೇಕಿದೆ.
ಐ ಡೋಂಟ್ ಕೇರ್, ಐ ಡೋಂಟ್ ಮೈಂಡ್ ಎಂದ ಚಕ್ರವರ್ತಿ;
"ಹಿಂದೂ ಮುಖಂಡರು, ಕಾರ್ಯಕರ್ತರನ್ನ ರಾಜ್ಯ ಕಾಂಗ್ರೆಸ್ ಸರಕಾರ ಟಾರ್ಗೆಟ್ ಮಾಡುತ್ತಿದೆ' ಎಂದು ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ "ಕಾಂಗ್ರೆಸ್ ನನ್ನನ್ನ ಹೇಟ್ ಮಾಡುತ್ತದೆ. ನನ್ನನ್ನು ಕಂಡರೇ ಅವರಿಗೆ ಕೋಪ. ಐಜಿ- ಡಿಐಜಿಗಳು ಎಲ್ಲಾ ಪೊಲೀಸ್ ಠಾಣೆಗೆ ಮಾಹಿತಿ ಕೇಳಿದ್ದಾರೆ. 2022 ರಿಂದ 2025 ರ ಜೂನ್ ವರೆಗೆ ಯಾವ್ಯಾವ ಕೇಸ್ ಗಳು ಇವೆ ಎಂದು ಮಾಹಿತಿ ಕೇಳಿದ್ದಾರೆ.|ಹೇಗಾದರೂ ಮಾಡಿ, ಒಳಗೆ ಹಾಕಿ ಧ್ವನಿ ಅಡಗಿಸಲು ನೋಡುತ್ತಿದ್ದಾರೆ ಎಂದರು.
ನಾನು ಇದಕ್ಕೆಲ್ಲಾ ಹೆದರುವುದಿಲ್ಲ, ಐ ಡೋಂಟ್ ಕೇರ್, ಐ ಡೋಂಟ್ ಮೈಂಡ್. ನೀವು ನನ್ನ ಒಳಗೆ ಹಾಕಿದರೆ ತುಂಬಾ ದಿನದಿಂದ ಓದದೇ ಇರುವ 15-20 ಪುಸ್ತಕ ಇದ್ದಾವೆ. ಅದೆಲ್ಲವನ್ನೂ ಓದಿ ಮುಗಿಸಿ ಹೊರಗೆ ಬರುತ್ತೇನೆ” ಎಂದರು.
Noted thinker and social activist Chakravarthy Sulibele has come under the scanner of the Karnataka police, with reports suggesting that legal action is being considered against him for a series of provocative statements made in recent times.Noted thinker and social activist Chakravarthy Sulibele has come under the scanner of the Karnataka police, with reports suggesting that legal action is being considered against him for a series of provocative statements made in recent times.Noted thinker and social activist Chakravarthy Sulibele has come under the scanner of the Karnataka police, with reports suggesting that legal action is being considered against him for a series of provocative statements made in recent times.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am