ಬ್ರೇಕಿಂಗ್ ನ್ಯೂಸ್
15-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು.
ರಸ್ತೆ ಮಾರ್ಗಗಳಲ್ಲಿ ಗುಡ್ಡ ಕುಸಿತವಾದ ಸ್ಥಳಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ನ್ಯಾಷನಲ್ ಹೈವೇ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಸ್ತೆ ಸಂಪರ್ಕ ಕಡಿತವಾದ ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿ. ನೀರು ನುಗ್ಗಿರುವ ತಗ್ಗು ಪ್ರದೇಶಗಳಲ್ಲಿ ಕುಟುಂಬಗಳನ್ನ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಸಚಿವರು ಸೂಚಿಸಿದರು.
ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯ ನಿರ್ವಹಿಸಬೇಕು. ಅಪಾಯದ ಅಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳಿ. ರಕ್ಷಣಾ ಸಾಮಗ್ರಿಗಳನ್ನು ಸನ್ನದ್ಧವಾಗಿಸಿ, ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಿ. ಕಂಟ್ರೋಲ್ ರೂಂ ನಿರಂತರ ಕಾರ್ಯಾಚರಣೆಯಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
Mangalore Take Strict Precautions to Prevent RainRelated Casualties, Minister Dinesh Gundu Rao Directs Dakshina Kannada Administration.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm