Mangalore Rain, School Holiday: ರೆಡ್ ಅಲರ್ಟ್ ಮುಂದುವರಿಕೆ ; ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ 

15-06-25 09:35 pm       Mangalore Correspondent   ಕರಾವಳಿ

ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಗೆ ಸೋಮವಾರ (ಜೂನ್ 16) ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 

ಮಂಗಳೂರು, ಜೂನ್ 15 : ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಗೆ ಸೋಮವಾರ (ಜೂನ್ 16) ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 

ಮಂಗಳೂರು, ಉಳ್ಳಾಲ, ಮೂಲ್ಕಿ - ಮೂಡುಬಿದ್ರೆ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗೆ ರಜೆ ನೀಡಲಾಗಿಲ್ಲ. ಕಳೆದ ವಾರ, ಜೂನ್ 12ರ ಗುರುವಾರ ಜಿಲ್ಲೆಯಾದ್ಯಂತ ರಜೆ ನೀಡಲಾಗಿತ್ತು. ಶನಿವಾರದ ಬಳಿಕ ಮಳೆ ಬಿರುಸುಗೊಂಡಿತ್ತು. 

ಹವಾಮಾನ ಇಲಾಖೆಯಿಂದ ಜೂನ್ 15ರ ವರೆಗೆ ರೆಡ್ ಅಲರ್ಟ್ ನೀಡಲಾಗಿತ್ತು. ಈಗ ರೆಡ್ ಅಲರ್ಟ್ ಸೋಮವಾರಕ್ಕೂ ಮುಂದುವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆಗಳಿಗೆ ರಜೆ ನೀಡಿದ್ದಾರೆ.

In view of the continued heavy rainfall and the extension of the red alert by the Meteorological Department, the Dakshina Kannada District Administration has declared a holiday for schools in four taluks on Monday, June 16. According to the official order issued by Dakshina Kannada Deputy Commissioner Mullai Muhilan, schools in Mangaluru, Ullal, Mulki-Moodbidri, and Bantwal taluks will remain closed.