ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm