ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm