ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.
ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm