ಬ್ರೇಕಿಂಗ್ ನ್ಯೂಸ್
15-06-25 11:04 pm Mangalore Correspondent ಕರಾವಳಿ
ಉಳ್ಳಾಲ, ಜೂ.15 : ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನ ಖಾಸಗಿ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಕಸ್ಮಿಕ ನಡೆದಿದ್ದು, ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಬೆಂಕಿ ನಂದಿಸಿದ ಪರಿಣಾಮ ಕಟ್ಟಡದಲ್ಲಿದ್ದ 147 ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ.
ಇಂದು ಸಂಜೆ 7.45 ರ ಹೊತ್ತಿಗೆ ಕಟ್ಟಡದ ನೆಲ ಮಹಡಿಯ ಸ್ವಿಚ್ ಬೋರ್ಡಿನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಬೆಂಕಿ ವ್ಯಾಪಿಸಿದೆ. ತಕ್ಷಣವೇ ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸುವ ಸಾಧನಗಳನ್ನ ತಂದು ಬೆಂಕಿ ನಂದಿಸಿದ್ದಾರೆ. ಬೆಂಕಿ ನಂದಿಸಿದ ಬಳಿಕ ಕಟ್ಟಡದ ಅಂತಸ್ತಿನ ಕೋಣೆಗಳಲ್ಲಿದ್ದ 147 ವಿದ್ಯಾರ್ಥಿನಿಯರನ್ನ ಸುರಕ್ಷಿತವಾಗಿ ಹೊರ ತಂದಿದ್ದಾರೆ.









ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳವು ಕೊಂಚ ವಿಳಂಬವಾಗಿ ಬಂದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳ ಬರುವಷ್ಟರಲ್ಲಿ ಭಾಗಶಃ ಬೆಂಕಿಯನ್ನು ಸ್ಥಳೀಯರೇ ನಂದಿಸುವಲ್ಲಿ ಸಫಲರಾಗಿದ್ದರು. ಕಟ್ಟಡದಲ್ಲಿದ್ದ ಎಲ್ಲಾ ವಿದ್ಯಾರ್ಥಿನಿಯರನ್ನ ನರ್ಸಿಂಗ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಬೇರೆ ಹಾಸ್ಟೆಲ್ ಗಳಿಗೆ ಸ್ಥಳಾಂತರಿಸಿದ್ದಾರೆ.
ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿಯೆಂಬ ಐದು ಮಹಡಿಯ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳ ಅಂತಸ್ತಿನ ವಿದ್ಯುತ್ ಸ್ವಿಚ್ ಬೋರ್ಡ್ ಗಳೆಲ್ಲವೂ ಸಂಪೂರ್ಣ ಸುಟ್ಟುಹೋಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
A major fire accident caused by an electrical short circuit occurred at a private hostel building in Deralakatte Junction this evening. Thanks to the swift and courageous response of local residents, 147 female nursing students were safely evacuated from the building without any casualties.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm