ಬ್ರೇಕಿಂಗ್ ನ್ಯೂಸ್
16-06-25 12:13 pm Mangalore Correspondent ಕರಾವಳಿ
ಪುತ್ತೂರು, ಜೂನ್.16: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ಇಂದು (ಜೂ.16) ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದ್ದು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಪಡುಮನೆ ನಿವಾಸಿ ಶಂಕರನಾರಾಯಣ ಭಟ್ (41) ಮೃತಪಟ್ಟ ದುರ್ದೈವಿ. ಕಾರ್ಕಳದಿಂದ ಧರ್ಮಸ್ಥಳ ಮಾರ್ಗವಾಗಿ ಸುಮಾರು 30 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರ ಆಕ್ರಂದನ ಮುಗಿಲುಮುಟ್ಟಿತ್ತು.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಂಕರನಾರಾಯಣ ಭಟ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ನಾಲ್ವರನ್ನು ಮಂಗಳೂರಿನ ಇಂಡಿಯನ್ ಆಸ್ಪತ್ರೆಗೆ ಮತ್ತು ಉಳಿದ ಗಾಯಾಳುಗಳನ್ನು ಪುತ್ತೂರಿನ ವಿವಿಧ ಆಸ್ಪತ್ರೆಗಳಿಗೆ ಆಂಬುಲೆನ್ಸ್ ಸೇರಿಸಲಾಗಿದೆ.
ಅಪಘಾತ ನಡೆದ ತಕ್ಷಣ ಸ್ಥಳೀಯರು ಮತ್ತು ಇತರ ವಾಹನ ಸವಾರರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು.
ವಿಷಯ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
A horrific road accident occurred in the early hours of Sunday near Lavathadka, close to Nelyadi on National Highway 75, when a Bengaluru-bound private bus rammed into a parked lorry, leaving one passenger dead and more than 18 others injured.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm