ಬ್ರೇಕಿಂಗ್ ನ್ಯೂಸ್
16-06-25 05:07 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 16 : ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಯುವಕರಿಬ್ಬರು ಬೈಕಿನಲ್ಲಿ ಹೊಳೆ ದಾಟಲು ಯತ್ನಿಸಿ ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದಲ್ಲದೆ, ಬಳಿಕ ಬಂಡೆಗಳ ಎಡೆಯಲ್ಲಿ ಸಿಲುಕಿ ಅಪಾಯದಿಂದ ಪಾರಾಗಿ ಬಂದ ಘಟನೆ ನಡೆದಿದೆ.
ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುವ ಹೊಳೆಯಲ್ಲಿ ಘಟನೆ ಸಂಭವಿಸಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಜೊತೆಯಾಗಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ಹೊಳೆಯನ್ನು ಬೈಕ್ ಸಮೇತ ದಾಟಲು ಯತ್ನಿಸಿದ್ದಾರೆ. ಈ ವೇಳೆ, ಬೈಕ್ ಸಹಿತ ಹೊಳೆ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.
ಹಿತ್ತಿಲಪೇಲ ಆಸುಪಾಸಿನ ಪ್ರದೇಶ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿದ್ದು, ಮಳೆಗಾಲದಲ್ಲಿ ಹೊಳೆ ಧುಮ್ಮಿಕ್ಕಿ ಹರಿಯುತ್ತದೆ. ಇಲ್ಲೊಂದು ಸೇತುವೆ ನಿರ್ಮಿಸಬೇಕು ಎನ್ನುವ ಒತ್ತಾಯವನ್ನು ಸ್ಥಳೀಯರು ಮಾಡುತ್ತ ಬಂದಿದ್ದರೂ ಅರಣ್ಯ ಇಲಾಖೆಯ ಕಾನೂನಿನಿಂದಾಗಿ ಸಾಧ್ಯವಾಗಿಲ್ಲ.
ಪ್ರದೇಶದಲ್ಲಿ ಸುಮಾರು 9 ಕುಟುಂಬಗಳ 60ರಷ್ಟು ಜನರು ವಾಸಿಸುತ್ತಿದ್ದು, ಮಕ್ಕಳು, ಯುವಕರು, ಮಹಿಳೆಯರು ದೈನಂದಿನ ಕಾರ್ಯಕ್ಕಾಗಿ ಹೊಳೆ ದಾಟಿಕೊಂಡೇ ಹೋಗಬೇಕಾಗಿದೆ. ಮೂರು ದಿನಗಳಿಂದ ಭಾರೀ ಮಳೆ ಆಗುತ್ತಿದ್ದು ಹೊಳೆಯಲ್ಲಿ ನೀರಿನ ಹರಿವು ಹೆಚ್ಚಿದ್ದರೂ ಯುವಕರು ದುಸ್ಸಾಹಸಕ್ಕಿಳಿದು ಪಾರಾಗಿ ಬಂದಿದ್ದಾರೆ.
Close Call in Savanaalu
— Headline Karnataka (@hknewsonline) June 16, 2025
Two youths swept away while trying to cross a flooded stream on a bike near #Kudremukh National Park. Luckily, got stuck between rocks and escaped unharmed. Locals demand a bridge as monsoon risks rise. #Karnataka #Monsoon #Beltangady #FloodAlert pic.twitter.com/sw1vsiWApu
In a dramatic turn of events, two young men were swept away along with their bike while attempting to cross a flooded stream in Savanaalu village but managed to escape with their lives after getting stuck between rocks. The incident occurred at Hittilapela near Koodujalu, a region that connects Manjadabettu in Savanaalu village to the Hittilapela area within the Kudremukh National Park limits
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm