ಬ್ರೇಕಿಂಗ್ ನ್ಯೂಸ್
16-06-25 05:07 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 16 : ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಯುವಕರಿಬ್ಬರು ಬೈಕಿನಲ್ಲಿ ಹೊಳೆ ದಾಟಲು ಯತ್ನಿಸಿ ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದಲ್ಲದೆ, ಬಳಿಕ ಬಂಡೆಗಳ ಎಡೆಯಲ್ಲಿ ಸಿಲುಕಿ ಅಪಾಯದಿಂದ ಪಾರಾಗಿ ಬಂದ ಘಟನೆ ನಡೆದಿದೆ.
ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುವ ಹೊಳೆಯಲ್ಲಿ ಘಟನೆ ಸಂಭವಿಸಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಜೊತೆಯಾಗಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ಹೊಳೆಯನ್ನು ಬೈಕ್ ಸಮೇತ ದಾಟಲು ಯತ್ನಿಸಿದ್ದಾರೆ. ಈ ವೇಳೆ, ಬೈಕ್ ಸಹಿತ ಹೊಳೆ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.
ಹಿತ್ತಿಲಪೇಲ ಆಸುಪಾಸಿನ ಪ್ರದೇಶ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿದ್ದು, ಮಳೆಗಾಲದಲ್ಲಿ ಹೊಳೆ ಧುಮ್ಮಿಕ್ಕಿ ಹರಿಯುತ್ತದೆ. ಇಲ್ಲೊಂದು ಸೇತುವೆ ನಿರ್ಮಿಸಬೇಕು ಎನ್ನುವ ಒತ್ತಾಯವನ್ನು ಸ್ಥಳೀಯರು ಮಾಡುತ್ತ ಬಂದಿದ್ದರೂ ಅರಣ್ಯ ಇಲಾಖೆಯ ಕಾನೂನಿನಿಂದಾಗಿ ಸಾಧ್ಯವಾಗಿಲ್ಲ.
ಪ್ರದೇಶದಲ್ಲಿ ಸುಮಾರು 9 ಕುಟುಂಬಗಳ 60ರಷ್ಟು ಜನರು ವಾಸಿಸುತ್ತಿದ್ದು, ಮಕ್ಕಳು, ಯುವಕರು, ಮಹಿಳೆಯರು ದೈನಂದಿನ ಕಾರ್ಯಕ್ಕಾಗಿ ಹೊಳೆ ದಾಟಿಕೊಂಡೇ ಹೋಗಬೇಕಾಗಿದೆ. ಮೂರು ದಿನಗಳಿಂದ ಭಾರೀ ಮಳೆ ಆಗುತ್ತಿದ್ದು ಹೊಳೆಯಲ್ಲಿ ನೀರಿನ ಹರಿವು ಹೆಚ್ಚಿದ್ದರೂ ಯುವಕರು ದುಸ್ಸಾಹಸಕ್ಕಿಳಿದು ಪಾರಾಗಿ ಬಂದಿದ್ದಾರೆ.
Close Call in Savanaalu
— Headline Karnataka (@hknewsonline) June 16, 2025
Two youths swept away while trying to cross a flooded stream on a bike near #Kudremukh National Park. Luckily, got stuck between rocks and escaped unharmed. Locals demand a bridge as monsoon risks rise. #Karnataka #Monsoon #Beltangady #FloodAlert pic.twitter.com/sw1vsiWApu
In a dramatic turn of events, two young men were swept away along with their bike while attempting to cross a flooded stream in Savanaalu village but managed to escape with their lives after getting stuck between rocks. The incident occurred at Hittilapela near Koodujalu, a region that connects Manjadabettu in Savanaalu village to the Hittilapela area within the Kudremukh National Park limits
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm