ಬ್ರೇಕಿಂಗ್ ನ್ಯೂಸ್
16-06-25 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆ ಮತ್ತು ಈ ಹಿಂದಿನ ಪೊಲೀಸ್ ಕಮಿಷನರ್ ನಡೆದುಕೊಂಡಿರುವ ರೀತಿ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ದ್ವೇಷ ಭಾಷಣಗಳು, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಈ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡಿದ್ದು ಈ ಬಗ್ಗೆ ಪತ್ರದ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದೇನೆ. ಗಮನಾರ್ಹ ಸಂಗತಿಯೆಂದರೆ, ಸಮಾಜಘಾತುಕ ವದಂತಿ ಹಬ್ಬಿಸುವುದು, ಪ್ರಚೋದನೆಗಳನ್ನು ಮಾಡುತ್ತಿದ್ದರೂ ಹಿಂದಿನ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ತ್ವರಿತ ಕ್ರಮ ಕೈಗೊಂಡಿದ್ದಾರೆ.
ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ಕರಾವಳಿ ಭಾಗದಲ್ಲಿ ಒಂದೆರಡು ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ಮತ್ತು ತ್ವರಿತಗತಿಯಲ್ಲಿ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.
ಆಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ಬಗ್ಗೆ ಗಂಭೀರ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುಟಿ ಖಾದರ್, ತಮ್ಮ ಪತ್ರದಲ್ಲಿ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Speaker UT Khader Writes to Home Minister, Demands Action Against Former Police Officials for Ignoring Hate Speech and Misinformation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am