ಬ್ರೇಕಿಂಗ್ ನ್ಯೂಸ್
16-06-25 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆ ಮತ್ತು ಈ ಹಿಂದಿನ ಪೊಲೀಸ್ ಕಮಿಷನರ್ ನಡೆದುಕೊಂಡಿರುವ ರೀತಿ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ದ್ವೇಷ ಭಾಷಣಗಳು, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಈ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡಿದ್ದು ಈ ಬಗ್ಗೆ ಪತ್ರದ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದೇನೆ. ಗಮನಾರ್ಹ ಸಂಗತಿಯೆಂದರೆ, ಸಮಾಜಘಾತುಕ ವದಂತಿ ಹಬ್ಬಿಸುವುದು, ಪ್ರಚೋದನೆಗಳನ್ನು ಮಾಡುತ್ತಿದ್ದರೂ ಹಿಂದಿನ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ತ್ವರಿತ ಕ್ರಮ ಕೈಗೊಂಡಿದ್ದಾರೆ.
ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ಕರಾವಳಿ ಭಾಗದಲ್ಲಿ ಒಂದೆರಡು ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ಮತ್ತು ತ್ವರಿತಗತಿಯಲ್ಲಿ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.
ಆಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ಬಗ್ಗೆ ಗಂಭೀರ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುಟಿ ಖಾದರ್, ತಮ್ಮ ಪತ್ರದಲ್ಲಿ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Speaker UT Khader Writes to Home Minister, Demands Action Against Former Police Officials for Ignoring Hate Speech and Misinformation.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am