ಬ್ರೇಕಿಂಗ್ ನ್ಯೂಸ್
17-06-25 12:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ಅತಿ ವೇಗದಿಂದ ಕಾರು ಚಲಾಯಿಸಿ ಮಳೆಯ ನಡುವೆ ನಿಯಂತ್ರಣ ತಪ್ಪಿದ್ದ ಸ್ಕಿಡ್ ಆಗಿದ್ದರಿಂದ ಕಾರು ಡಿವೈಡರ್ ಬಡಿದು 2-3 ಪಲ್ಟಿಯಾದ ಘಟನೆ ನಗರದ ನಂತೂರಿನ ತಾರೆತೋಟ ಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಲತಃ ಕೇರಳದ ಆಲಪ್ಪುಝ ನಿವಾಸಿಯಾಗಿದ್ದು, ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮುಗಿಸಿ ಅಲ್ಲಿಯೇ ಡ್ಯೂಟಿಗೆ ಸೇರಿದ್ದ ಡಾ.ಮೊಹಮ್ಮದ್ ಅಮಲ್ (29) ಮೃತರು. ನಿನ್ನೆ ರಾತ್ರಿ 11.45ರ ಸುಮಾರಿಗೆ ಇವರು ತನ್ನ ಗೆಳತಿ, ಕಣಚೂರು ಮೆಡಿಕಲ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿನಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಂತೂರಿನಿಂದ ಪಂಪ್ವೆಲ್ ಕಡೆಗೆ ತನ್ನ ಸಿಯಾಝ್ ಕಾರಿನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದು, ಅತಿ ವೇಗದಿಂದಾಗಿ ಡಿವೈಡರ್ ತಾಗಿ ನಡುವೆ ಹಾಕಿರುವ ಗ್ರಿಲ್ಸ್ ಮೇಲೆ ಹೋಗಿದೆ. ಆನಂತರ ಗ್ರಿಲ್ಸ್ ತಾಗಿಕೊಂಡೇ 2-3 ಪಲ್ಟಿಯಾಗಿ ರಸ್ತೆಯ ಮೇಲೆ ಬಿದ್ದಿದೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಸೀರಿಯಸ್ ಆಗಿದ್ದ ಅವರನ್ನು ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.




ಹಿಂದೆ ಮುಂದಿನಿಂದ ಅತಿ ವೇಗದಲ್ಲಿ ವಾಹನಗಳು ತೆರಳುತ್ತಿದ್ದಾಗಲೇ ಹಠಾತ್ ಘಟನೆ ಸಂಭವಿಸಿದೆ. ಇದೇ ವೇಳೆ, ಹಿಂಬದಿಯಿಂದ ಬರುತ್ತಿದ್ದ ಲೋಡ್ ತುಂಬಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಎದುರಿನಲ್ಲಿದ್ದ ವಾಹನಗಳು ಹಠಾತ್ ಬ್ರೇಕ್ ಹಾಕಿದ್ದರಿಂದ ಗಾಬರಿಗೊಂಡ ಲಾರಿ ಚಾಲಕನೂ ಬ್ರೇಕ್ ತುಳಿದಿದ್ದರಿಂದ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಅಡ್ಡ ಬಿದ್ದಿದೆ. ಘಟನೆಯಿಂದಾಗಿ ರಾತ್ರಿ ವೇಳೆ ನಂತೂರು- ಪಂಪ್ವೆಲ್ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ಟ್ರಾಫಿಕ್ ಜಾಮ್ ಆಗಿತ್ತು. ವೈದ್ಯನ ಜೊತೆಗಿದ್ದ ವಿದ್ಯಾರ್ಥಿನಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic road accident late last night, a 29-year-old physiotherapy doctor from Privtate Medical College lost his life after his car skidded and overturned multiple times on the Nanthoor–Pumpwell stretch of the highway in Mangaluru. The victim, identified as Dr. Mohammad Amal, originally from Alappuzha, Kerala, had completed his physiotherapy course at a Medical College Hospital in Deralakatte.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm