ಬ್ರೇಕಿಂಗ್ ನ್ಯೂಸ್
18-06-25 10:24 am Mangalore Correspondent ಕರಾವಳಿ
ಮಂಗಳೂರು, ಜೂನ್ 18 : ಜಪ್ಪಿನಮೊಗರು ಹೆದ್ದಾರಿಯಲ್ಲಿ ನಸುಕಿನ ವೇಳೆಗೆ ಭೀಕರ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಸ್ಕೋಡಾ ಕಾರು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ, ಮಂಗಳೂರಿನ ಕದ್ರಿ ನಿವಾಸಿ ಅಮನ್ ರಾವ್(22) ಮತ್ತು ಚಾಲಕನ ಸೀಟಿನ ಹಿಂಬದಿಯಲ್ಲಿದ್ದ ದೇರೆಬೈಲ್ ನಿವಾಸಿ, ಎನ್ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ(24) ಮೃತಪಟ್ಟವರು.
ತಡರಾತ್ರಿ 2.30ರ ವೇಳೆಗೆ ಘಟನೆ ನಡೆದಿದೆ. ರಾ.ಹೆ. 66ರ ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಎದುರಲ್ಲೇ ಅಪಘಾತ ನಡೆದಿದೆ. ಐವರು ಯುವಕರಿದ್ದ ಫೋಕ್ಸ್ ವೇಗನ್ ವರ್ಟಸ್ ಕಾರು ತಲಪಾಡಿಯಿಂದ ಮಂಗಳೂರಿನ ಕಡೆಗೆ ಅತಿ ವೇಗದಿಂದ ಧಾವಿಸುತ್ತಿತ್ತು. ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಕಾರು ಸಂಪೂರ್ಣ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಏರ್ ಬ್ಯಾಗ್ ಚಿಂದಿಯಾಗಿದೆ. ಸಾಮಾನ್ಯವಾಗಿ ಜರ್ಮನಿ ಮೂಲದ ಫೋಕ್ಸ್ ವೇಗನ್ ಕಾರು ಡಿಕ್ಕಿಯಾದರೂ ಪ್ರಾಣಾಪಾಯ ಆಗಲ್ಲ. ಏರ್ ಬ್ಯಾಗ್ ಮತ್ತು ಹೊರಭಾಗವೂ ಗಟ್ಟಿಯಾಗಿರತ್ತದೆ. ಇಲ್ಲಿ 200 ಕಿಮೀ ವೇಗದಲ್ಲಿ ಬಂದಿರುವ ಸಾಧ್ಯತೆಯಿದ್ದು ಅದರಿಂದಾಗಿ ಇಷ್ಟೊಂದು ಭೀಕರ ಸ್ಥಿತಿಯಾಗಿದೆ ಎಂದು ಕಾರಿನ ಬಗ್ಗೆ ತಿಳಿದವರು ಹೇಳುತ್ತಾರೆ.
ಮೃತಪಟ್ಟವರಲ್ಲಿ ಓಂಶ್ರೀ ಪೂಜಾರಿ ದಕ್ಷಿಣ ಕನ್ನಡ ಎನ್ ಎಸ್ಐಯು ಘಟಕದ ಉಪಾಧ್ಯಕ್ಷರಾಗಿದ್ದು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯವಾಗಿದ್ದರು. ಅಮನ್ ರಾವ್ ಆತನ ಗೆಳೆಯನಾಗಿದ್ದು ರಾತ್ರಿ ಕಂಕನಾಡಿಯಲ್ಲಿ ಪಾರ್ಟಿ ಮುಗಿಸಿ ತಲಪಾಡಿಯಲ್ಲಿ ಊಟ ತಿಂದು ಮುಗಿಸಿ ಹಿಂತಿರುಗುತ್ತಿದ್ದರು. ಜೊತೆಗಿದ್ದ ವಂಶಿ ಮತ್ತು ಆಶಿಕ್ ಗಂಭೀರ ಗಾಯಗೊಂಡಿದ್ದು ತೀವ್ರ ನಿಗಾದಲ್ಲಿದ್ದಾರೆ. ಇವರೊಂದಿಗೆ ಇನ್ನೊಬ್ಬ ಇಟಲಿ ಮೂಲದ ಪ್ರವಾಸಿಗ ಜೆರ್ರಿ ಎಂಬಾತನಿದ್ದು ಆತ ಅಪಾಯದಿಂದ ಪಾರಾಗಿದ್ದಾನೆ. ಮೃತ ಅಮನ್ ರಾವ್, ಕಾಂಗ್ರೆಸ್ ಮುಖಂಡ ಮಿಥುನ್ ರೈ ಜೊತೆಗೆ ಗುರುತಿಸಿಕೊಂಡಿದ್ದು ಫ್ಲೆಕ್ಸ್, ಪೋಸ್ಟರ್ ಮಾಡುವ ಉದ್ಯಮ ನಡೆಸುತ್ತಿದ್ದ.
A tragic accident occurred early morning on the NH-66 near Japinamogaru, where a speeding Volkswagen Virtus car lost control and crashed into a divider. Two young men, Aman Rao (22) of Kadri and Omshree Poojary (24), NSUI district vice-president from Derebail, died on the spot. The vehicle, reportedly traveling at over 200 km/h, was completely mangled.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm