ಬ್ರೇಕಿಂಗ್ ನ್ಯೂಸ್
18-06-25 06:38 pm Mangalore Correspondent ಕರಾವಳಿ
ಪುತ್ತೂರು, ಜೂನ್ 18 : ಸರಕು ಬಾಡಿಗೆ ಮಾಡಲೆಂದು ಕೊಂಡೊಯ್ದಿದ್ದ ಲಾರಿಯನ್ನು ಅದರ ಚಾಲಕನೇ ಅಡವಿಟ್ಟು ಮಾಲಕನಿಗೆ ಮೋಸಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳ ಕೊನೆಯಲ್ಲಿ ಲಾರಿಗೆ ಚಾಲಕನನ್ನು ನೇಮಿಸಿ ಸರಕು ಸಾಗಾಟ ಉದ್ದೇಶಕ್ಕಾಗಿ ಲಾರಿಯನ್ನು ನೀಡಿದ್ದರು. ಆಬಳಿಕ ತನ್ನ ಪಾಡಿಗಿದ್ದ ಚಾಲಕ ಫೈರೋಜ್, ಬಾಡಿಗೆ ಹಣವನ್ನು ಮಾಲೀಕರಿಗೆ ನೀಡದೆ ನೆಪ ಹೇಳಿ ಮುಂದೂಡುತ್ತಿದ್ದ. ಪ್ರಶ್ನೆ ಮಾಡಿದಾಗ, ಲಾರಿ ಕೆಟ್ಟು ಹೋಗಿದೆ, ರಿಪೇರಿ ಮಾಡಿಸುತ್ತಿದ್ದೇನೆಂದು ನೆಪ ಹೇಳಿದ್ದ. ಈ ಬಗ್ಗೆ ಮಾಲೀಕ ಪರ್ವೀಜ್, ಲಾರಿಯನ್ನು ಮರಳಿಸುವಂತೆ ಕೇಳಿದಾಗ ಲಾರಿಯನ್ನು ನೀಡಲ್ಲ ಎಂದು ಹೇಳಿ ದಬಾಯಿಸಿದ್ದಾನೆ. ಆಬಳಿಕ ಮತ್ತೆ ವಿಚಾರಿಸಿದಾಗ ಲಾರಿಯನ್ನು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ಬಳಿ ಅಡವಿಗೆ ಇಟ್ಟಿದ್ದೇನೆ. ಬೇಕಿದ್ದರೆ ನೀವೇ ಹೋಗಿ ಪಡೆದುಕೊಳ್ಳಿ ಎಂಬ ಹೇಳಿದ್ದ.
ಇದರಿಂದ ಬೇಸತ್ತ ಲಾರಿ ಮಾಲೀಕ ಮಹಿಳೆ, ಲಾರಿಗೆ ಸಾಲ ನೀಡಿದ್ದ ಸಂಸ್ಥೆಯ ಪ್ರತಿನಿಧಿಯ ಜೊತೆಗೂಡಿ ಮಂಗಳೂರಿನ ವ್ಯಕ್ತಿಯ ಬಳಿಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ, ಲಾರಿ ತನ್ನ ಬಳಿ ಇರೋದನ್ನು ಒಪ್ಪಿಕೊಂಡರೂ, ಲಾರಿಯನ್ನು ಮರಳಿಸಲು ನಿರಾಕರಿಸಿದ್ದಾನೆ. ಲಾರಿ ಕೇಳಿಕೊಂಡು ಬಂದರೆ ಪರಿಣಾಮ ನೆಟ್ಟಗಿರಲ್ಲ. ಮತ್ತೆ ಬಂದರೆ ಜೀವ ಸಹಿತ ಇಲ್ಲಿಂದ ಹೋಗಲ್ಲ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಲಾರಿ ಮಾಲೀಕರು ತಾನು ನೇಮಿಸಿದ್ದ ಚಾಲಕ ಮತ್ತು ಲಾರಿಯನ್ನು ಇಟ್ಟುಕೊಂಡಿರುವ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ
A shocking case of cheating and criminal intimidation has come to light in Puttur, where a truck owner was allegedly deceived by her driver, who pledged the rented vehicle to a third party without consent. When the owner attempted to recover the truck, she was reportedly threatened with dire consequences. A formal complaint has been filed at the Puttur Town Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am