ಬ್ರೇಕಿಂಗ್ ನ್ಯೂಸ್
18-06-25 06:38 pm Mangalore Correspondent ಕರಾವಳಿ
ಪುತ್ತೂರು, ಜೂನ್ 18 : ಸರಕು ಬಾಡಿಗೆ ಮಾಡಲೆಂದು ಕೊಂಡೊಯ್ದಿದ್ದ ಲಾರಿಯನ್ನು ಅದರ ಚಾಲಕನೇ ಅಡವಿಟ್ಟು ಮಾಲಕನಿಗೆ ಮೋಸಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳ ಕೊನೆಯಲ್ಲಿ ಲಾರಿಗೆ ಚಾಲಕನನ್ನು ನೇಮಿಸಿ ಸರಕು ಸಾಗಾಟ ಉದ್ದೇಶಕ್ಕಾಗಿ ಲಾರಿಯನ್ನು ನೀಡಿದ್ದರು. ಆಬಳಿಕ ತನ್ನ ಪಾಡಿಗಿದ್ದ ಚಾಲಕ ಫೈರೋಜ್, ಬಾಡಿಗೆ ಹಣವನ್ನು ಮಾಲೀಕರಿಗೆ ನೀಡದೆ ನೆಪ ಹೇಳಿ ಮುಂದೂಡುತ್ತಿದ್ದ. ಪ್ರಶ್ನೆ ಮಾಡಿದಾಗ, ಲಾರಿ ಕೆಟ್ಟು ಹೋಗಿದೆ, ರಿಪೇರಿ ಮಾಡಿಸುತ್ತಿದ್ದೇನೆಂದು ನೆಪ ಹೇಳಿದ್ದ. ಈ ಬಗ್ಗೆ ಮಾಲೀಕ ಪರ್ವೀಜ್, ಲಾರಿಯನ್ನು ಮರಳಿಸುವಂತೆ ಕೇಳಿದಾಗ ಲಾರಿಯನ್ನು ನೀಡಲ್ಲ ಎಂದು ಹೇಳಿ ದಬಾಯಿಸಿದ್ದಾನೆ. ಆಬಳಿಕ ಮತ್ತೆ ವಿಚಾರಿಸಿದಾಗ ಲಾರಿಯನ್ನು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ಬಳಿ ಅಡವಿಗೆ ಇಟ್ಟಿದ್ದೇನೆ. ಬೇಕಿದ್ದರೆ ನೀವೇ ಹೋಗಿ ಪಡೆದುಕೊಳ್ಳಿ ಎಂಬ ಹೇಳಿದ್ದ.
ಇದರಿಂದ ಬೇಸತ್ತ ಲಾರಿ ಮಾಲೀಕ ಮಹಿಳೆ, ಲಾರಿಗೆ ಸಾಲ ನೀಡಿದ್ದ ಸಂಸ್ಥೆಯ ಪ್ರತಿನಿಧಿಯ ಜೊತೆಗೂಡಿ ಮಂಗಳೂರಿನ ವ್ಯಕ್ತಿಯ ಬಳಿಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ, ಲಾರಿ ತನ್ನ ಬಳಿ ಇರೋದನ್ನು ಒಪ್ಪಿಕೊಂಡರೂ, ಲಾರಿಯನ್ನು ಮರಳಿಸಲು ನಿರಾಕರಿಸಿದ್ದಾನೆ. ಲಾರಿ ಕೇಳಿಕೊಂಡು ಬಂದರೆ ಪರಿಣಾಮ ನೆಟ್ಟಗಿರಲ್ಲ. ಮತ್ತೆ ಬಂದರೆ ಜೀವ ಸಹಿತ ಇಲ್ಲಿಂದ ಹೋಗಲ್ಲ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಲಾರಿ ಮಾಲೀಕರು ತಾನು ನೇಮಿಸಿದ್ದ ಚಾಲಕ ಮತ್ತು ಲಾರಿಯನ್ನು ಇಟ್ಟುಕೊಂಡಿರುವ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ
A shocking case of cheating and criminal intimidation has come to light in Puttur, where a truck owner was allegedly deceived by her driver, who pledged the rented vehicle to a third party without consent. When the owner attempted to recover the truck, she was reportedly threatened with dire consequences. A formal complaint has been filed at the Puttur Town Police Station.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am