ಬ್ರೇಕಿಂಗ್ ನ್ಯೂಸ್
18-06-25 10:46 pm Mangalore Correspondent ಕರಾವಳಿ
ಮಂಗಳೂರು, ಜೂನ್ 18 : ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ಮಾಡಿಸಲು ವ್ಯಕ್ತಿಯೊಬ್ಬರಿಂದ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಕಂದಾಯ ಇಲಾಖೆಯ ಸರ್ವೆಯರ್ ಮತ್ತು ಮಧ್ಯವರ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಕಂಕನಾಡಿ ಗ್ರಾಮದ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ಮಾಡಿಸಲು ಫೆಬ್ರವರಿ 2025ರಂದು ಮಂಗಳೂರು ಯು.ಪಿ.ಓ.ಆರ್ ಕಚೇರಿಗೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಕಡತದ ಬಗ್ಗೆ ವಿಚಾರಿಸಿದ ಸಂದರ್ಭದಲ್ಲಿ ಸರ್ವೆಯರ್ ನಂದೀಶ್ ಅವರು ಏಪ್ರಿಲ್ 2025 ರಂದು ಸರ್ವೆ ನಡೆಸಿ ನಂತರ ರೂ. 6500/- ಲಂಚದ ಹಣವನ್ನ ಸ್ವೀಕರಿಸಿದ್ದರು. ಅಲ್ಲದೆ, ರೂ. 20,000/- ಲಂಚದ ಹಣವನ್ನು ಬ್ರೋಕರ್ ಬಿಜೈ ನಿವಾಸಿ ದಿವಾಕರ್ ಮೂಲಕ ಪಡೆದಿದ್ದರು.
ಆನಂತರ ಸರ್ವೆಯರ್ ನಂದೀಶ್ ಅವರು ಬಜಾಲ್ ಮತ್ತು ಕಂಕನಾಡಿ ಗ್ರಾಮದ ಎರಡೂ ಸ್ಥಳಗಳ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು ಹೆಚ್ಚುವರಿಯಾಗಿ ರೂ. 18,000/- ಲಂಚದ ಹಣ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಸಾಕ್ಷಿ ಪುರಾವೆಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.
ಸರ್ವೆಯರ್ ನಂದೀಶ್ ಅವರು ಜೂನ್ ತಿಂಗಳಲ್ಲಿ ಮತ್ತೆ ರೂ.15,000 ಲಂಚದ ಹಣವನ್ನು ಮಧ್ಯವರ್ತಿ ಮೂಲಕ ಪಡೆದಿದ್ದರು. ವ್ಯಕ್ತಿಯಿಂದ ಒಟ್ಟು 41,500 ರೂ. ಲಂಚ ಪಡೆದಿದ್ದು, ಜೂನ್ 18ರಂದು ಹೆಚ್ಚುವರಿಯಾಗಿ ರೂ. 2000 ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸರ್ವೆಯರ್ ನಂದೀಶ್ ಮತ್ತು ಮಧ್ಯವರ್ತಿ ದಿವಾಕರ್ ಎಂಬವರನ್ನು ಬಂಧಿಸಲಾಗಿದೆ.
ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಟ್ರಾಪ್ ಕಾರ್ಯಾಚರಣೆ ಕೈಗೊಂಡಿದ್ದರು.
In a major crackdown on corruption, Lokayukta officials arrested a surveyor from the Revenue Department and a broker for allegedly accepting a bribe of ₹43,000 in connection with preparing a single site map and property card for land in Mangaluru.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am