ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm