ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm