ಬ್ರೇಕಿಂಗ್ ನ್ಯೂಸ್
20-06-25 03:54 pm Udupi Correspondent ಕರಾವಳಿ
ಕುಂದಾಪುರ, ಜೂನ್ 20 : ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡಬಾರದು ಎಂದು ತಾಕೀತು ಮಾಡಿ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕುಂದಾಪುರ ಪೊಲೀಸರು ನೋಟಿಸ್ ನೀಡಿದ್ದಾರೆ.
ಕುಂದಾಪುರದಲ್ಲಿ `ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಅವರಿಂದ ಜೂ.20, 21 ಮತ್ತು 22ರಂದು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಉಪನ್ಯಾಸದಲ್ಲಿ ರಾಜಕೀಯ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಆಯೋಜಕರಿಗೆ ಹಾಗೂ ಸೂಲಿಬೆಲೆ ಅವರಿಗೆ ಷರತ್ತು ವಿಧಿಸಿ ನೊಟೀಸ್ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬ ಕಾನೂನು ಯಾವಾಗಿನಿಂದ ಜಾರಿಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ. ನನಗೆ ನೋಟಿಸ್ ಹೊಸತಲ್ಲ, ಬಹಳ ಕಡೆಗಳಲ್ಲಿ ನೋಟಿಸ್ ಕೊಟ್ಟಿದ್ದಾರೆ. ಈ ಬಾರಿ ರಾಜಕೀಯ ಮಾತನಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದಿದ್ದಾರೆ. ನೆಹರು, ಇಂದಿರಾ, ರಾಜೀವ್ ಕುರಿತಂತೆ ಮಾತನಾಡಬಾರದು ಎಂದು ಅರ್ಥವೇ? ಘಜ್ನಿ, ಘೋರಿ, ಔರಂಗಜೇಬ್ ಮುಂತಾದ ಕ್ರೂರಿಗಳ ತೇಜೋವಧೆ ಮಾಡಬಾರದೆಂದು ಅರ್ಥವೇ? ಈ ಬಗ್ಗೆ ಕುಂದಾಪುರ ಪೊಲೀಸರೇ ಮಾಹಿತಿ ಕೊಟ್ಟರೆ ಉತ್ತಮ. ನಾನು ಕುಂದಾಪುರಕ್ಕೆ ಬರಬಾರದೆಂದು ಹೇಳುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬನ್ನಿ, ನಾನು ಕುಂದಾಪುರಕ್ಕೆ ಬಂದೇ ಬರುತ್ತೇನೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮ ಆಯೋಜಕ ನಿರಂಜನ್ ಶೆಟ್ಟಿ ಪ್ರತಿಕ್ರಿಯಿಸಿದ್ದು ಎನ್ ಎಸ್ ಯುಐ ಕಡೆಯವರು ಚಕ್ರವರ್ತಿ ಸೂಲಿಬೆಲೆ ಕುಂದಾಪುರಕ್ಕೆ ಬರಲು ಬಿಡಬಾರದು ಎಂದು ಪೊಲೀಸರಿಗೆ ಮನವಿ ನೀಡಿದ್ದಾರೆ. ಕಾಶ್ಮೀರದ ವಿಚಾರ ಮಾತನಾಡದೇ ಅಖಂಡ ಭಾರತದ ಬಗ್ಗೆ ಉಪನ್ಯಾಸ ಅಸಾಧ್ಯ. ಕಾಶ್ಮೀರ ಕಾಂಗ್ರೆಸ್ ಕಾಲದಲ್ಲಿ ಸಮಸ್ಯೆ ಆಗಿ ಉಳಿದಿತ್ತು. ಈ ವಿಚಾರ ಜನರಿಗೆ ತಿಳಿಯಬಾರದು ಅನ್ನೋದು ಇವರ ಉದ್ದೇಶ ಇರಬಹುದು. ಕಾಂಗ್ರೆಸ್ ಬಣ್ಣ ಬಯಲಾಗುತ್ತೆ ಎನ್ನುವ ಕಾರಣಕ್ಕೆ ತಡೆಯಲು ಮುಂದಾಗಿದ್ದಾರೆ. ನಾವು ಕಾರ್ಯಕ್ರಮ ಮಾಡಿಯೇ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
A controversy has erupted in Kundapura after police issued a notice to noted orator and activist Chakravarthy Sulibele ahead of his scheduled lecture series titled “Now, Only After Building Akhand Bharat Will I Rest”. The event is scheduled to be held on June 20, 21, and 22.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 09:15 pm
HK News Desk
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
20-06-25 09:02 pm
Mangalore Correspondent
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm