ಬ್ರೇಕಿಂಗ್ ನ್ಯೂಸ್
20-06-25 11:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 20 : ಇತ್ತೀಚೆಗೆ ನಡೆದ ಕುಡುಪು ಗುಂಪು ಹತ್ಯೆ ಪ್ರಕರಣ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧನ ಮಾಡಿಲ್ಲ. ಪೊಲೀಸರು ಮತ್ತು ಆರೋಪಿ ನಡುವೆ ಸಂಬಂಧ ಇರುವುದೇ ಇದಕ್ಕೆ ಕಾರಣವೆಂದು ವ್ಯಕ್ತಿಯೊಬ್ಬ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ಸಿಇಎನ್ ಪೊಲೀಸರು ಆತನನ್ನು ಕರೆಸಿ ವಾರ್ನಿಂಗ್ ಮಾಡಿದ ಪ್ರಸಂಗ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವಾಮಂಜೂರು ನಿವಾಸಿ ಸಜಿತ್ ಶೆಟ್ಟಿ ಎಂಬ ವ್ಯಕ್ತಿ ಈ ಪೋಸ್ಟ್ ಮಾಡಿದ್ದು, ಪೊಲೀಸರು ಆತನನ್ನು ಕರೆಸಿ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನುವುದಕ್ಕೆ ಏನಾದರೂ ಸಾಕ್ಷಿ ಇದೆಯಾ ಎಂದು ಕೇಳಿದ್ದಾರೆ. ಅಲ್ಲದೆ, ಪೊಲೀಸರು ಮತ್ತು ಆರೋಪಿ ನಡುವೆ ಸಂಬಂಧ ಇದೆಯೆಂದು ಆರೋಪ ಮಾಡಿರುವ ಬಗ್ಗೆ ಕಾರಣ ಕೇಳಿದ್ದಾರೆ. ಯಾವುದೇ ಸಾಕ್ಷಿ ಇಲ್ಲದೇ ಇದ್ದರೂ ಆರೋಪ ಮಾಡಿದ್ದನ್ನು ಪ್ರಶ್ನಿಸಿದ್ದು, ಸಜಿತ್ ಶೆಟ್ಟಿ ತನ್ನ ಬಳಿ ಯಾವುದೇ ಸಾಕ್ಷ್ಯ ಇಲ್ಲದಿದ್ದರೂ ಪೋಸ್ಟ್ ಹಾಕಿದ್ದಾಗಿ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ. ಆತನ ಹೇಳಿಕೆ ಪಡೆದು ಎಚ್ಚರಿಕೆ ನೀಡಿ ಠಾಣೆಯಿಂದ ಬಿಟ್ಟು ಕಳುಹಿಸಲಾಗಿತ್ತು.

ಆನಂತರ, ಸಜಿತ್ ಶೆಟ್ಟಿ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಹೇಳಿಕೆಯನ್ನು ಪೊಲೀಸರು ಜಾಲತಾಣದಲ್ಲಿ ಹಾಕಿದ್ದಾರೆ ಎನ್ನಲಾಗುತ್ತಿದ್ದು, ಇದರಿಂದ ತೀವ್ರ ಮುಖಭಂಗಕ್ಕೀಡಾದ ಸಜಿತ್ ತನಗೆ ಮಾನಸಿಕ ಕಿರುಕುಳ ಆಗಿದೆಯೆಂದು ಫೇಸ್ಬುಕ್ ಲೈವ್ ಬಂದು ವಿಡಿಯೋ ಮಾಡಿದ್ದಾನೆ. ಜಾಲತಾಣದಲ್ಲಿ ತನ್ನ ತಪ್ಪೊಪ್ಪಿಗೆ ಹೇಳಿಕೆಯ ವಿಡಿಯೋ ನೋಡಿ ಎಲ್ಲರೂ ಫೋನ್ ಮಾಡಿ ಕೇಳುತ್ತಿದ್ದಾರೆ, ತನಗೆ ತೀವ್ರ ಮಾನಸಿಕ ಟಾರ್ಚರ್ ಆಗ್ತಾ ಇದೆ, ನನ್ನನ್ನು ಠಾಣೆಗೆ ಕರೆಸಿ ಎಸಿಪಿ ಮತ್ತು ಇನ್ಸ್ ಪೆಕ್ಟರ್ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ತೀವ್ರ ವೇದನೆ ಆಗುತ್ತಿದ್ದು, ಇದರಿಂದ ತನಗೇನಾದರೂ ತೊಂದರೆಯಾದರೆ ಅದಕ್ಕೆ ಪೊಲೀಸರೇ ಹೊಣೆ, ಪೊಲೀಸ್ ಕಮಿಷನರ್ ಹೊಣೆಯೆಂದು ವಿಡಿಯೋ ಮಾಡಿ ಫೇಸ್ಬುಕ್ ಅಪ್ಲೋಡ್ ಮಾಡಿದ್ದಾನೆ.
ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಯಾವುದೇ ವ್ಯಕ್ತಿ ಅಪರಾಧ ವಿಚಾರದಲ್ಲಿ ಪೊಲೀಸರಿಗೆ ಮಾಹಿತಿ ನೀಡಬಹುದು. ಸಾಕ್ಷಿಗಳಿದ್ದಲ್ಲಿ ಪೊಲೀಸರಿಗೆ ತಿಳಿಸಿ, ಆರೋಪಿ ಪತ್ತೆಗೆ ಸಹಕರಿಸಬಹುದು. ಸಜಿತ್ ಶೆಟ್ಟಿ ಗುಂಪು ಹತ್ಯೆ ಪ್ರಕರಣದಲ್ಲಿ ಇನ್ನೊಬ್ಬ ಪ್ರಮುಖ ಆರೋಪಿಯಿದ್ದಾನೆಂದು ತಿಳಿಸಿದ ಮೇರೆಗೆ ತನಿಖಾಧಿಕಾರಿ ಆತನನ್ನು ಠಾಣೆಗೆ ಕರೆಸಿ ಏನಾದ್ರೂ ಸಾಕ್ಷ್ಯ ಇದೆಯೇ ಎಂದು ಕೇಳಿದ್ದಾರೆ. ತನಿಖಾಧಿಕಾರಿಗೆ ಯಾವುದೇ ವ್ಯಕ್ತಿಯಲ್ಲಿ ಮಾಹಿತಿ ಇದ್ದರೆ, ಅತನನ್ನು ಠಾಣೆಗೆ ಕರೆಸಿ ಹೇಳಿಕೆ ದಾಖಲಿಸುವ ಅಧಿಕಾರ ಇದೆ. ಅದರಂತೆ, ಆತನನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದಿದ್ದು ತನ್ನಲ್ಲಿ ಆರೋಪದ ಬಗ್ಗೆ ಯಾವುದೇ ಸಾಕ್ಷ್ಯ ಇಲ್ಲವೆಂದು ತಿಳಿಸಿದ್ದಾರೆ.
ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲೆ ಅಲ್ಲ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವವರಾಗಲೀ, ಸಾರ್ವಜನಿಕ ಜೀವನದಲ್ಲಿ ಇರೋರಾಗಲೀ ಪ್ರಕರಣ ಸಂಬಂಧಿಸಿ ಮಾಹಿತಿ ಇದ್ದಲ್ಲಿ, ಪ್ರತ್ಯಕ್ಷ ಸಾಕ್ಷಿ ಏನಾದ್ರೂ ಆಗಿದ್ದಲ್ಲಿ ತನಿಖಾಧಿಕಾರಿಗೆ ಸಹಕಾರ ನೀಡಬೇಕು. ವಿನಾಕಾರಣ ಪೋಸ್ಟ್ ಮಾಡಿ ಕಾನೂನು ವಿರುದ್ಧ ನಡೆದುಕೊಂಡರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಪ್ರಕಾರ ಕ್ರಮ ತೆಗೆದುಕೊಳ್ಳುವುದಕ್ಕೆ ಅವಕಾಶ ಇದೆ. ಇವತ್ತು ಮತ್ತೆ ಅದೇ ವ್ಯಕ್ತಿ ಫೇಸ್ಬುಕ್ ನಲ್ಲಿ ವಿಡಿಯೋ ಮಾಡಿ ಮಾನಸಿಕ ಕಿರುಕುಳ ಆಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಪೊಲೀಸರು ತಮ್ಮ ವ್ಯಾಪ್ತಿಯ ಎಲ್ಲ ಸಾರ್ವಜನಿಕರ ಹಿತವನ್ನು ಕಾಪಾಡುವ ಸ್ಥಾನದಲ್ಲಿರುವುದರಿಂದ ಈ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಈ ವ್ಯಕ್ತಿ ಮಾನಸಿಕ ತೊಂದರೆ ಎದುರಿಸುತ್ತಿದ್ದರೆ ಕೂಡಲೇ ಮಾನಸಿಕ ತಜ್ಞರನ್ನು ಕಂಡು ಕೌನ್ಸಿಲಿಂಗ್ ಮತ್ತು ಚಿಕಿತ್ಸೆ ಪಡೆದುಕೊಂಡರೆ ಉತ್ತಮ ಎಂದು ಸಲಹೆ ಮಾಡಿದ್ದಾರೆ.
In a recent development related to the Kudupu group murder case, a Facebook post by a local youth alleging a possible nexus between police officials and a prime accused has stirred controversy. The post, made by Sajith Shetty, a resident of Vamanjoor and known Congress supporter, claimed that the police were deliberately delaying the arrest due to internal connections.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 03:06 pm
HK News Staffer
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
Moodbidri Inspector Sandesh, Police: ಮೂಡುಬಿದ್...
16-03-26 07:20 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am