ಬ್ರೇಕಿಂಗ್ ನ್ಯೂಸ್
10-08-20 05:37 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 9: ಯಾವತ್ತೂ ಮಲ್ಲಿಗೆ ಹೂವಿನ ಕೊರತೆಯನ್ನೇ ಎದುರಿಸಿರದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿ ಈ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ಮಲ್ಲಿಗೆ ಅಟ್ಟೆಯ ಅಭಾವ ಕಂಡಿದ್ದಳಂತೆ. ದೇವಿಯ ಪೂಜೆಗೂ ಹೀಗಾಯ್ತಲ್ಲ ಅಂತ ಅಲ್ಲಿನ ಅರ್ಚಕರು ಮರುಕವನ್ನೂ ಪಟ್ಟಿದ್ದರಂತೆ. ಈ ಮಾತು ಕೇಳಿದ ಶಾಸಕರೊಬ್ವರ ಮನವೂ ಕರಗಿತ್ತಂತೆ..
ಹೌದು.. ಮೂಲ್ಕಿ ಸೀಮೆಯ ತಾಯಿ ಬಪ್ಪನಾಡು ದೇವಿಗೆ ಇನ್ನು ಯಾವತ್ತೂ ಮಲ್ಲಿಗೆಯ ಕೊರತೆ ಎದುರಾಗಬಾರದು. ಯಾವುದೇ ಲಾಕ್ ಡೌನ್ ಬರಲಿ, ಮುಷ್ಕರವೇ ಎದುರಾಗಲಿ.. ಪ್ರತಿ ದಿನವೂ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲೇಬೇಕು ಎಂದು ನಿರ್ಧರಿಸಿದ್ದು ಮೂಡುಬಿದ್ರೆಯ ಮಾಜಿ ಶಾಸಕ ಅಭಯಚಂದ್ರ ಜೈನ್. ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕರ ಮಾತು ಕೇಳಿದ ಅಭಯಚಂದ್ರ ಜೈನ್, ವರ್ಷದ 365 ದಿನವೂ ತಾನೇ ಮಲ್ಲಿಗೆ ಅಟ್ಟೆ ಅರ್ಪಿಸುತ್ತೇನೆ ಎಂದು ಅಭಯ ನೀಡಿದ್ದಾರೆ.


ಆದರೆ, ಅಭಯರು ತಾವು ಅರ್ಪಿಸುವ ಮಲ್ಲಿಗೆ ಅಟ್ಟೆಯ ಅರ್ಪಣೆಯ ಹಿಂದೆ ರಾಜಕೀಯ ಉದ್ದೇಶ ಇಟ್ಟುಕೊಂಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸಾರಥ್ಯ ವಹಿಸಿರುವ ಡಿ.ಕೆ.ಶಿವಕುಮಾರ್ ಹೆಸರಲ್ಲಿ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲಿ ಎಂದಿದ್ದಾರೆ. ತಮ್ಮ ಹೆಸರು ಬೇಡ. ಡಿಕೆಶಿ ಹೆಸರಿನಲ್ಲಿಯೇ ದೇವಿಗೆ ಮಲ್ಲಿಗೆ ಸೇವೆ ರೂಪದಲ್ಲಿ ಅರ್ಪಿಸುವುದಾಗಿ ದೇವಸ್ಥಾನದಲ್ಲಿ ಬರೆಸಿಕೊಂಡಿದ್ದಾರಂತೆ. ದೇವಿಯ ಅಭಯ ಡಿಕೆಶಿಗೆ ಸದಾ ಇರಲೆಂದು ಅಭಯರು ಹಾರೈಸಿದ್ದಾರೆಂದು ಜೈನರ ಆಪ್ತರು ತಿಳಿಸಿದ್ದಾರೆ.
ಮುಲ್ಕಿ ಅರಸರಾದ ದುಗ್ಗಣ್ಣ ಸಾವಂತರ ಸಮ್ಮುಖದಲ್ಲಿ ಅಭಯಚಂದ್ರ ಜೈನ್ ಮತ್ತು ಕಾಂಗ್ರೆಸ್ ಪ್ರಮುಖರು ಸೇರಿ ಮಲ್ಲಿಗೆ ಸೇವೆ ಅರ್ಪಿಸಿದ್ದು ವಿಶೇಷ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm