ಬ್ರೇಕಿಂಗ್ ನ್ಯೂಸ್
22-12-20 05:48 pm Mangalore Correspondent ಕರಾವಳಿ
ಮಂಗಳೂರು, ಡಿ.22: ಬ್ರಿಟನ್ನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಆತಂಕ ಸೃಷ್ಟಿಸಿರುವಾಗಲೇ 15 ಮಂದಿ ಇಂಗ್ಲೆಂಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆಂಬ ಮಾಹಿತಿ ಕರಾವಳಿಯಲ್ಲಿ ಆತಂಕ ಸೃಷ್ಟಿಸಿದೆ.
ಎರಡು ದಿನಗಳ ಹಿಂದೆ ಬೆಂಗಳೂರು ಮೂಲಕ 15 ಮಂದಿ ಮಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ ಏಳು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ತೆ ಮಾಡಿದ್ದು, ಇನ್ನೂ ಎಂಟು ಮಂದಿಯ ಪತ್ತೆ ಆಗಿಲ್ಲ ಎನ್ನಲಾಗುತ್ತಿದೆ. ಬ್ರಿಟನ್ನಲ್ಲಿ ಕಟ್ಟೆಚ್ಚರ ಘೋಷಣೆ ಆದಕೂಡಲೇ ಭಾರತ- ಬ್ರಿಟನ್ ನಡುವಿನ ವಿಮಾನ, ಹಡಗು ಸಂಚಾರವನ್ನು ನಿರ್ಬಂಧಿಸಿದೆ.

ಆದರೆ, ಇದಕ್ಕೂ ಮುನ್ನ ಬ್ರಿಟನ್ನಿಂದ ಆಗಮಿಸಿದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ನಡುವೆ, ಕರ್ನಾಟಕ ರಾಜ್ಯಕ್ಕೆ 135 ಮಂದಿ ಇಂಗ್ಲೆಂಡಿನಿಂದ ಆಗಮಿಸಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಿದ್ದು, ಅವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವು ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.

ಮಂಗಳೂರಿಗೆ ಆಗಮಿಸಿದ್ದ 15 ಮಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬಂದಿದ್ದರು ಎನ್ನಲಾಗುತ್ತಿದೆ. ಆದರೂ ತಮ್ಮೂರಿಗೆ ತೆರಳುವ ಮುನ್ನ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂಬ ನಿಯಮ ಪಾಲನೆ ಮಾಡಬೇಕಿದೆ. ಹೊಸ ರೀತಿಯ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಸೇರಿದಂತೆ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರಕಾರ ಸೂಚನೆ ನೀಡಿದೆ.
New Coronavirus Strain fear grips in Mangalore as 15 persons have entered Mangalore coming from UK. 7 have been found and still 8 persons are out of trace it is said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm