ಬ್ರೇಕಿಂಗ್ ನ್ಯೂಸ್
22-12-20 05:48 pm Mangalore Correspondent ಕರಾವಳಿ
ಮಂಗಳೂರು, ಡಿ.22: ಬ್ರಿಟನ್ನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಆತಂಕ ಸೃಷ್ಟಿಸಿರುವಾಗಲೇ 15 ಮಂದಿ ಇಂಗ್ಲೆಂಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆಂಬ ಮಾಹಿತಿ ಕರಾವಳಿಯಲ್ಲಿ ಆತಂಕ ಸೃಷ್ಟಿಸಿದೆ.
ಎರಡು ದಿನಗಳ ಹಿಂದೆ ಬೆಂಗಳೂರು ಮೂಲಕ 15 ಮಂದಿ ಮಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ ಏಳು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ತೆ ಮಾಡಿದ್ದು, ಇನ್ನೂ ಎಂಟು ಮಂದಿಯ ಪತ್ತೆ ಆಗಿಲ್ಲ ಎನ್ನಲಾಗುತ್ತಿದೆ. ಬ್ರಿಟನ್ನಲ್ಲಿ ಕಟ್ಟೆಚ್ಚರ ಘೋಷಣೆ ಆದಕೂಡಲೇ ಭಾರತ- ಬ್ರಿಟನ್ ನಡುವಿನ ವಿಮಾನ, ಹಡಗು ಸಂಚಾರವನ್ನು ನಿರ್ಬಂಧಿಸಿದೆ.

ಆದರೆ, ಇದಕ್ಕೂ ಮುನ್ನ ಬ್ರಿಟನ್ನಿಂದ ಆಗಮಿಸಿದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ನಡುವೆ, ಕರ್ನಾಟಕ ರಾಜ್ಯಕ್ಕೆ 135 ಮಂದಿ ಇಂಗ್ಲೆಂಡಿನಿಂದ ಆಗಮಿಸಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಿದ್ದು, ಅವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವು ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.

ಮಂಗಳೂರಿಗೆ ಆಗಮಿಸಿದ್ದ 15 ಮಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬಂದಿದ್ದರು ಎನ್ನಲಾಗುತ್ತಿದೆ. ಆದರೂ ತಮ್ಮೂರಿಗೆ ತೆರಳುವ ಮುನ್ನ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂಬ ನಿಯಮ ಪಾಲನೆ ಮಾಡಬೇಕಿದೆ. ಹೊಸ ರೀತಿಯ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಸೇರಿದಂತೆ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರಕಾರ ಸೂಚನೆ ನೀಡಿದೆ.
New Coronavirus Strain fear grips in Mangalore as 15 persons have entered Mangalore coming from UK. 7 have been found and still 8 persons are out of trace it is said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm