ಬ್ರೇಕಿಂಗ್ ನ್ಯೂಸ್
22-12-20 05:48 pm Mangalore Correspondent ಕರಾವಳಿ
ಮಂಗಳೂರು, ಡಿ.22: ಬ್ರಿಟನ್ನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಆತಂಕ ಸೃಷ್ಟಿಸಿರುವಾಗಲೇ 15 ಮಂದಿ ಇಂಗ್ಲೆಂಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆಂಬ ಮಾಹಿತಿ ಕರಾವಳಿಯಲ್ಲಿ ಆತಂಕ ಸೃಷ್ಟಿಸಿದೆ.
ಎರಡು ದಿನಗಳ ಹಿಂದೆ ಬೆಂಗಳೂರು ಮೂಲಕ 15 ಮಂದಿ ಮಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ ಏಳು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ತೆ ಮಾಡಿದ್ದು, ಇನ್ನೂ ಎಂಟು ಮಂದಿಯ ಪತ್ತೆ ಆಗಿಲ್ಲ ಎನ್ನಲಾಗುತ್ತಿದೆ. ಬ್ರಿಟನ್ನಲ್ಲಿ ಕಟ್ಟೆಚ್ಚರ ಘೋಷಣೆ ಆದಕೂಡಲೇ ಭಾರತ- ಬ್ರಿಟನ್ ನಡುವಿನ ವಿಮಾನ, ಹಡಗು ಸಂಚಾರವನ್ನು ನಿರ್ಬಂಧಿಸಿದೆ.

ಆದರೆ, ಇದಕ್ಕೂ ಮುನ್ನ ಬ್ರಿಟನ್ನಿಂದ ಆಗಮಿಸಿದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ನಡುವೆ, ಕರ್ನಾಟಕ ರಾಜ್ಯಕ್ಕೆ 135 ಮಂದಿ ಇಂಗ್ಲೆಂಡಿನಿಂದ ಆಗಮಿಸಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಿದ್ದು, ಅವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವು ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.

ಮಂಗಳೂರಿಗೆ ಆಗಮಿಸಿದ್ದ 15 ಮಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬಂದಿದ್ದರು ಎನ್ನಲಾಗುತ್ತಿದೆ. ಆದರೂ ತಮ್ಮೂರಿಗೆ ತೆರಳುವ ಮುನ್ನ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂಬ ನಿಯಮ ಪಾಲನೆ ಮಾಡಬೇಕಿದೆ. ಹೊಸ ರೀತಿಯ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಸೇರಿದಂತೆ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರಕಾರ ಸೂಚನೆ ನೀಡಿದೆ.
New Coronavirus Strain fear grips in Mangalore as 15 persons have entered Mangalore coming from UK. 7 have been found and still 8 persons are out of trace it is said.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm