ಬ್ರೇಕಿಂಗ್ ನ್ಯೂಸ್
22-12-20 05:48 pm Mangalore Correspondent ಕರಾವಳಿ
ಮಂಗಳೂರು, ಡಿ.22: ಬ್ರಿಟನ್ನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಆತಂಕ ಸೃಷ್ಟಿಸಿರುವಾಗಲೇ 15 ಮಂದಿ ಇಂಗ್ಲೆಂಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆಂಬ ಮಾಹಿತಿ ಕರಾವಳಿಯಲ್ಲಿ ಆತಂಕ ಸೃಷ್ಟಿಸಿದೆ.
ಎರಡು ದಿನಗಳ ಹಿಂದೆ ಬೆಂಗಳೂರು ಮೂಲಕ 15 ಮಂದಿ ಮಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ ಏಳು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ತೆ ಮಾಡಿದ್ದು, ಇನ್ನೂ ಎಂಟು ಮಂದಿಯ ಪತ್ತೆ ಆಗಿಲ್ಲ ಎನ್ನಲಾಗುತ್ತಿದೆ. ಬ್ರಿಟನ್ನಲ್ಲಿ ಕಟ್ಟೆಚ್ಚರ ಘೋಷಣೆ ಆದಕೂಡಲೇ ಭಾರತ- ಬ್ರಿಟನ್ ನಡುವಿನ ವಿಮಾನ, ಹಡಗು ಸಂಚಾರವನ್ನು ನಿರ್ಬಂಧಿಸಿದೆ.

ಆದರೆ, ಇದಕ್ಕೂ ಮುನ್ನ ಬ್ರಿಟನ್ನಿಂದ ಆಗಮಿಸಿದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ನಡುವೆ, ಕರ್ನಾಟಕ ರಾಜ್ಯಕ್ಕೆ 135 ಮಂದಿ ಇಂಗ್ಲೆಂಡಿನಿಂದ ಆಗಮಿಸಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಿದ್ದು, ಅವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವು ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.

ಮಂಗಳೂರಿಗೆ ಆಗಮಿಸಿದ್ದ 15 ಮಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬಂದಿದ್ದರು ಎನ್ನಲಾಗುತ್ತಿದೆ. ಆದರೂ ತಮ್ಮೂರಿಗೆ ತೆರಳುವ ಮುನ್ನ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂಬ ನಿಯಮ ಪಾಲನೆ ಮಾಡಬೇಕಿದೆ. ಹೊಸ ರೀತಿಯ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಸೇರಿದಂತೆ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರಕಾರ ಸೂಚನೆ ನೀಡಿದೆ.
New Coronavirus Strain fear grips in Mangalore as 15 persons have entered Mangalore coming from UK. 7 have been found and still 8 persons are out of trace it is said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm