ಬ್ರೇಕಿಂಗ್ ನ್ಯೂಸ್
26-06-25 11:52 am Mangalore Correspondent ಕರಾವಳಿ
ಮಂಗಳೂರು, ಜೂನ್ 26 : ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಪಿವಿಎಸ್ ವೃತ್ತದ ಬಳಿಯ ರಾಮಭವನ ಕಾಂಪ್ಲೆಕ್ಸ್ ನೆಲ ಮಹಡಿಯ ಕೆನರಾ ಬ್ಯಾಂಕ್ ಸ್ಟೋರ್ ರೂಮ್ ನಲ್ಲಿ ನಡೆದಿದೆ.
ಮೃತರನ್ನು ಅಳಕೆ ನಿವಾಸಿ ಗಿರಿಧರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೆನರಾ ಬ್ಯಾಂಕ್ ಕೊಡಿಯಾಲ್ ಬೈಲ್ ಶಾಖೆಯಲ್ಲಿ 40 ವರ್ಷ ಕಾರ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ಮೇಲಿನ ಪ್ರೀತಿಗೆ ಕಚೇರಿಗೆ ಬಂದು ಹೋಗುತ್ತಿದ್ದರು. ನಿನ್ನೆ ಸಂಜೆ ರಾಮಭವನ ಕಾಂಪ್ಲೆಕ್ಸ್ ಬ್ಯಾಂಕ್ ಕಚೇರಿಗೆ ಬಂದಿದ್ದವರು ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನೆಲೆ ಅವರ ಪತ್ನಿ ಬಂದರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಇಂದು ಬೆಳಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕಿನ ಸ್ಟೋರ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಗಿರಿಧರ್ ಯಾದವ್ ಅವರು ರಾಜ್ಯ ಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ.
A retired bank employee was found deceased at the office premises of Canara Bank, located on the ground floor of the Ramabhavan Complex near PVS Circle in Mangaluru. The individual has been identified as Giridhar Yadav (61), a resident of Alake. He had served at the Canara Bank branch in Kodialbail for nearly four decades before recently retiring. Despite his retirement, Yadav continued to visit the bank regularly due to his long-standing connection with the institution.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm