ಬ್ರೇಕಿಂಗ್ ನ್ಯೂಸ್
            
                        27-06-25 10:17 pm Mangalore Correspondent ಕರಾವಳಿ
            ಮಂಗಳೂರು, ಜೂನ್ 27 : ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಕೋರೆಗಳು ಬಂದ್ ಆಗಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೆಂಪುಕಲ್ಲು ಕೋರೆ ಹಾಗೂ ಲಾರಿ ಮಾಲಕರ ಒಕ್ಕೂಟದ ಸಮಾಲೋಚನಾ ಸಭೆ ಬಿ.ಸಿ.ರೋಡಿನಲ್ಲಿ ನಡೆದಿದ್ದು ಜೂನ್ 30ರಂದು ಕೆಡಿಪಿ ಸಭೆಯಲ್ಲಿ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಜುಲೈ 3ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ.
ಜೂನ್ 30ರ ಕೆಡಿಪಿ ಸಭೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದಿದ್ದಲ್ಲಿ ಮುಂದಕ್ಕೆ ರಾಜಕೀಯ ರಹಿತವಾಗಿ ಹೋರಾಟ ನಡೆಸಬೇಕೆಂದು ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿಭಟನೆಯಲ್ಲಿ ಕನಿಷ್ಠ ಹತ್ತು ಸಾವಿರ ಮಂದಿ ಭಾಗಿಯಾಗುವಂತೆ ಮಾಡುವ ನಿಟ್ಟಿನಲ್ಲಿ ವಲಯವಾರು ಸಭೆಗಳನ್ನು ನಡೆಸುವುದು, ಅನಿವಾರ್ಯವಾದರೆ ಉಪವಾಸ ಸತ್ಯಾಗ್ರಹ ನಡೆಸುವುದು, ಅಗತ್ಯ ಬಿದ್ದರೆ ಹೈಕೋರ್ಟ್ ಮೊರೆ ಹೋಗುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನಿಸಲಾಗಿದೆ.


ಕೇರಳದಲ್ಲಿ ಕೆಂಪು ಕಲ್ಲು ಟನ್ ಗೆ ರಾಯಲ್ಟಿ 42 ರೂಪಾಯಿ ಇದ್ದಾಗ ಅಲ್ಲಿ ನಡೆದ ಹೋರಾಟದ ಫಲವಾಗಿ 32 ರೂಪಾಯಿಗೆ ಇಳಿದಿದೆ, ಅಲ್ಲದೆ ಜಿಪಿಎಸ್ ವ್ಯವಸ್ಥೆಯನ್ನೂ ರದ್ದುಪಡಿಸಲಾಗಿದೆ. ಆದರೆ ಕರ್ನಾಟಕದಲ್ಲಿ 97 ರೂಪಾಯಿ ಇದ್ದ ರಾಯಲ್ಟಿ ಏಕಾಏಕಿ 154 ರೂಪಾಯಿಗೆ ಏರಿಸಲಾಗಿದ್ದು, ಜಿಪಿಎಸ್ ವ್ಯವಸ್ಥೆಯಿಂದಲೂ ಸಂಕಷ್ಟ ಎದುರಾಗಿದೆ. ಉಸ್ತುವಾರಿ ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನ್ಯಾಯ ಸಿಗದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿ ಕೆಂಪುಕಲ್ಲು ವಲಯದ ಸಾಮರ್ಥ್ಯ ತೋರ್ಪಡಿಸುವುದು ಅನಿವಾರ್ಯವಾಗಲಿದೆ. ಕೇರಳದಲ್ಲಿ ಕೆಂಪುಕಲ್ಲು ಪಾಯದ ಸಮಸ್ಯೆ ನಿವಾರಣೆಗಾಗಿ ಉಪವಾಸ ಸತ್ಯಾಗ್ರಹ ನಡೆದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಸಂಘ ಎಲ್ಲಾ ರೀತಿಯ ಸಹಕಾರ ನೀಡಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಸಮಸ್ಯೆ ಬಂದಾಗ ಕೇರಳದಿಂದ ಯಾವುದೇ ಸಹಕಾರ ಸಿಗುತ್ತಿಲ್ಲ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕೆಂಪುಕಲ್ಲು ಕೋರೆ ಹಾಗೂ ಲಾರಿ ಮಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ಸತೀಶ್ ಆಚಾರ್ಯ ತಿಳಿಸಿದರು.
ಜಿಲ್ಲಾ ಕೋಶಾಧಿಕಾರಿ ರಾಮ ಮುಗರೋಡಿ, ಮುಡಿಪು ವಲಯಾಧ್ಯಕ್ಷ ವಿಶ್ವನಾಥ್ ರೈ, ಕೈಕಂಬ ವಲಯಾಧ್ಯಕ್ಷ ಧೀರಜ್ ಅಮೀನ್, ಮೂಡಬಿದ್ರೆ ವಲಯಾಧ್ಯಕ್ಷ
ಪ್ರವೀಣ್ ಡಿಸೋಜ, ಲಾರಿ ಮಾಲಕರ ಸಂಘದ ಮೂಡಬಿದ್ರೆ ವಲಯಾಧ್ಯಕ್ಷ ರವಿಶಂಕರ್ ಮಿಜಾರ್, ವಿಟ್ಲ ವಲಯಾಧ್ಯಕ್ಷ ಸುಧೀರ್ ಕೋಟ್ಯಾನ್, ಬಂಟ್ವಾಳ ವಲಯಾಧ್ಯಕ್ಷ ಮೋಹನ್ ಶೆಟ್ಟಿ, ಎಕ್ಕಾರು ವಲಯಾಧ್ಯಕ್ಷ ಗಣೇಶ್ ಶೆಟ್ಟಿ, ಪುತ್ತೂರು ವಲಯಾಧ್ಯಕ್ಷ ಹೇಮಚಂದ್ರ, ಸುಳ್ಯ ವಲಯಾಧ್ಯಕ್ಷ ಪ್ರಕಾಶ್ ಅಡ್ಕಾರ್, ಕಿನ್ನಿಗೋಳಿ ವಲಯಾಧ್ಯಕ್ಷ ಗೋಪಾಲ ಮೊದಲಾದವರು ಉಪಸ್ಥಿತರಿದ್ದರು.
            
            
            Following strict enforcement actions by the police, red stone quarries in Dakshina Kannada district have come to a standstill. In response, the Dakshina Kannada District Red Stone Quarry and Lorry Owners’ Association held a key consultation meeting at B.C. Road to discuss the ongoing crisis.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm