ಬ್ರೇಕಿಂಗ್ ನ್ಯೂಸ್
30-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಹಂಚು ಜಾರುವುದನ್ನು ತಿಳಿದು ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತ ತಪ್ಪಿದೆ.
ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 12.30ರ ವೇಳೆಗೆ ಘಟನೆಯಾಗಿದ್ದು ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿದ್ದಂತೆ ಮಕ್ಕಳು ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ತರಗತಿ ಕೊಠಡಿಯಿದ್ದ ಆ ಭಾಗದ ಹಂಚು ಪೂರ್ತಿಯಾಗಿ ಕುಸಿದು ಕೆಳಕ್ಕೆ ಬಿದ್ದಿದೆ.




ಘಟನೆಯಲ್ಲಿ ಶೋನಿತ್ ಎಂಬ ಯುಕೆಜಿ ವಿದ್ಯಾರ್ಥಿಗೆ ತಲೆ ಮತ್ತು ಮುಖಕ್ಕೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಶಾಲೆಯನ್ನು ದುರಸ್ತಿ ಪಡಿಸಲಾಗಿತ್ತು. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಊರವರೇ ಸೇರಿ ಶಾಲೆ ನಡೆಸುತ್ತಿದ್ದೇವೆ
ಹಿಂದೆ ಇದು ಅನುದಾನಿತ ಶಾಲೆಯಾಗಿದ್ದು ಆನಂತರ ಇಲ್ಲಿನ ಮುಖ್ಯ ಶಿಕ್ಷಕಿ ನಿವೃತ್ತಿಯಾದ ಬಳಿಕ ಮತ್ತೆ ಸರ್ಕಾರದಿಂದ ನೇಮಕಾತಿ ಆಗಿರಲಿಲ್ಲ. ಮುಖ್ಯಪ್ರಾಣ ದೇವರ ಹೆಸರಲ್ಲಿದ್ದ ಶಾಲೆ ನಿಲುಗಡೆ ಆಗುತ್ತದೆ ಎನ್ನುವಾಗ ಊರವರು ಸೇರಿ ದಾನಿಗಳ ಸಹಕಾರದಿಂದ ಶಾಲೆಯನ್ನು ಉಳಿಸಿದ್ದೆವು. ಈಗ ಮೂರು ವರ್ಷದಿಂದ ಎಲ್ಕೆಜಿ, ಯುಕೆಜಿ ಮತ್ತು ನರ್ಸರಿ ತರಗತಿಯನ್ನು ಖಾಸಗಿಯಾಗಿಯೇ ನಡೆಸುತ್ತಿದ್ದೇವೆ. ಸರ್ಕಾರದ ಯಾವುದೇ ಅನುದಾನ ಇಲ್ಲ. ಊರಿಗೊಂದು ಶಾಲೆ ಬೇಕೆಂಬ ಕಾಳಜಿಯಿಂದ ಮಾಡುತ್ತಿದ್ದೇವೆ. ಕಳೆದ ವರ್ಷ ನಾವು ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಶಾಲೆ ದುರಸ್ತಿ ಮಾಡಿದ್ದೆವು. ಹಂಚು, ಪಕ್ಕಾಸು ಎಲ್ಲ ಬದಲಾಯಿಸಿದ್ದೆವು. ಈಗ ಸಣ್ಣ ಗಾಳಿಗೆ ಕುಸಿದು ಬಿದ್ದಿದೆ. ಹೇಗೆ ಬಿದ್ದಿದೆ ಎನ್ನುವುದು ಗೊತ್ತಿಲ್ಲ. ಆದರೆ ದೇವರು ಯಾವುದೇ ಅಪಾಯ ಆಗದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 21 ಸಣ್ಣ ಮಕ್ಕಳಿದ್ದರೂ ಒಂದು ಮಗು ಬಿಟ್ಟರೆ ಯಾರಿಗೂ ತೊಂದರೆ ಆಗಿಲ್ಲ ಎಂದು ಸ್ಥಳೀಯರಾದ ವಿಜಯ ಕುಮಾರ್ ಮತ್ತು ಬಾಲು ಪೇಜಾವರ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
A major tragedy was narrowly avoided in Pejavara village on the outskirts of Mangaluru when the roof of a classroom collapsed during school hours due to strong winds. Fortunately, most students had rushed out moments before the collapse, preventing a serious disaster.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm