ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm