ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am