ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 06:15 pm
Mangalore Correspondent
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm