ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm