ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm